ರಾಜ್ಯದಲ್ಲಿ ಕೋವಿಡ್ ಗೆ ಮತ್ತೆ 102 ಬಲಿ; 2 ಸಾವಿರ ದಾಟಿದ ಸಾವಿನ ಸಂಖ್ಯೆ
ಒಂದೇ ದಿನ 5,536 ಮಂದಿಗೆ ಕೊರೋನ ಪಾಸಿಟಿವ್
ಬೆಂಗಳೂರು, ಜು.28: ರಾಜ್ಯದಲ್ಲಿ ಕೆಲದಿನಗಳಿಂದ ಮಹಾಮಾರಿ ಕೊರೋನ ಸೋಂಕು ಆತಂಕಕಾರಿ ಸ್ಥಿತಿಯಲ್ಲಿ ಏರುತ್ತಿದೆ. ದೈನಂದಿನ ಪ್ರಕರಣಗಳಲ್ಲಿ ಮತ್ತಷ್ಟು ಹೆಚ್ಚಳವಾಗಿದ್ದು, 5 ಸಾವಿರಕ್ಕೂ ಅಧಿಕ ಪ್ರಕರಣಗಳು ದಿನದಲ್ಲಿ ಪತ್ತೆಯಾಗುತ್ತಿವೆ. ಈಗಾಗಲೇ ಸೋಂಕಿತರ ಸಂಖ್ಯೆ 1 ಲಕ್ಷಕ್ಕೂ ಹೆಚ್ಚಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಸೋಮವಾರ ಸಂಜೆಯಿಂದ ಮಂಗಳವಾರ ಸಂಜೆವರೆಗೆ ಮತ್ತೆ 5,536 ಮಂದಿಗೆ ಕೊರೋನ ವೈರಸ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಒಟ್ಟು ಸಂಖ್ಯೆ 1,07,001 ಕ್ಕೆ ಏರಿಕೆಯಾಗಿದೆ. 24 ಗಂಟೆಗಳಲ್ಲಿ 102 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 2,055ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಒಂದೇ ದಿನ 40 ಮಂದಿ ಕೊರೋನ ಸೋಂಕಿಗೆ ಬಲಿಯಾಗಿದ್ದಾರೆ. ಮೈಸೂರು 8, ಉಡುಪಿ 7, ಬೆಳಗಾವಿ 6, ಕಲಬುರಗಿ 6, ಧಾರವಾಡ 6, ಹಾಸನ 5, ದಾವಣಗೆರೆ 4, ಚಿಕ್ಕಬಳ್ಳಾಪುರ 3, ದಕ್ಷಿಣ ಕನ್ನಡ 3, ಬಾಗಲಕೋಟೆ 2, ಗದಗ 2, ಬೀದರ್ 2, ಚಿಕ್ಕಮಗಳೂರು, ಉತ್ತರ ಕನ್ನಡ, ಕೋಲಾರ, ಕೊಪ್ಪಳ, ರಾಯಚೂರು, ತುಮಕೂರು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ತಲಾ ಒಂದು ಸಾವು ಸಂಭವಿಸಿದೆ.
ಸೋಂಕು ಖಚಿತಗೊಂಡ ಪ್ರಕರಣಗಳ ಪೈಕಿ ಬೆಂಗಳೂರು ನಗರ 1,898, ಬಳ್ಳಾರಿ 452, ಕಲಬುರಗಿ 283, ಬೆಳಗಾವಿ 228, ಮೈಸೂರು 220, ತುಮಕೂರು 207, ಕೋಲಾರ 174, ದಕ್ಷಿಣ ಕನ್ನಡ 173, ಧಾರವಾಡ 173, ವಿಜಯಪುರ 153, ಕೊಪ್ಪಳ 144, ದಾವಣಗೆರೆ 135, ಬಾಗಲಕೋಟೆ 115, ಉಡುಪಿ 109, ಹಾಸನ 108, ಬೆಂಗಳೂರು ಗ್ರಾಮಾಂತರ 107, ರಾಮನಗರ 101, ಮಂಡ್ಯ 96, ರಾಯಚೂರು 93, ಗದಗ 73, ಚಿಕ್ಕಬಳ್ಳಾಪುರ 72, ಯಾದಗಿರಿ 67, ಚಿತ್ರದುರ್ಗ 66, ಚಿಕ್ಕಮಗಳೂರು 55, ಶಿವಮೊಗ್ಗ 54, ಚಾಮರಾಜನಗರ 52, ಉತ್ತರ ಕನ್ನಡ 47, ಹಾವೇರಿ 40, ಬೀದರ್ 39, ಕೊಡಗು ಜಿಲ್ಲೆಯಲ್ಲಿ 2 ಪ್ರಕರಣ ಪಾಸಿಟಿವ್ ಬಂದಿದೆ.
ಒಟ್ಟಾರೆ ರಾಜ್ಯದಲ್ಲಿ 1,07,001 ಕೊರೋನ ಸೋಂಕಿತರ ಪೈಕಿ 40,504 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. ಇದರಲ್ಲಿ ಇಂದು ಒಂದೇ ದಿನ 2,819 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ಇದುವರೆಗೆ 2,055 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದು, 64,434 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.