ಜೈಲಿನಿಂದ ಹೊರಬಂದ ಎರಡೇ ತಿಂಗಳಲ್ಲಿ ರೌಡಿಯ ಕೊಲೆ
ಬೆಂಗಳೂರು, ಆ.4: ಹಳೇ ದ್ವೇಷದ ಹಿನ್ನೆಲೆ ಜೈಲಿನಿಂದ ಹೊರಬಂದ ಎರಡೇ ತಿಂಗಳಿನಲ್ಲಿ ವ್ಯಕ್ತಿಯನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿರುವ ಆರೋಪ ಕೇಳಿಬಂದಿದೆ.
ಸುರೇಶ್ ಎಂಬಾತ ಕೊಲೆಯಾದ ರೌಡಿ ಎಂದು ಇಲ್ಲಿನ ಕೊತ್ತನೂರು ಠಾಣಾ ಪೊಲೀಸರು ತಿಳಿಸಿದ್ದಾರೆ.
ಆ.1ರಂದು ದುಷ್ಕರ್ಮಿಗಳು ಸುರೇಶ್ ಅನ್ನು ಕೊಲೆ ಮಾಡಿ ನಿರ್ಜನ ಪ್ರದೇಶದಲ್ಲಿ ಎಸೆದು ಹೋಗಿದ್ದರು. ಮಂಗಳವಾರ ಈ ಪ್ರದೇಶದಲ್ಲಿ ತೆರಳುತ್ತಿದ್ದ ಸಾರ್ವಜನಿಕರು ಮೃತ ದೇಹ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಬಗ್ಗೆ ತನಿಖೆಗೆ ನಡೆಸಿದಾಗ ಸುರೇಶ್ ಪೂರ್ವ ವಿಭಾಗದ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಎಂದು ತಿಳಿದುಬಂದಿದೆ. ಈ ಸಂಬಂಧ ಕೊತ್ತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
Next Story