ರಾಜ್ಯದಲ್ಲಿ ಸರಕಾರ ಅಸ್ತಿತ್ವದಲ್ಲಿದೆಯೇ?: ಸಿದ್ದರಾಮಯ್ಯ ವಾಗ್ದಾಳಿ
ಬೆಂಗಳೂರು, ಆ.6: ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರಕಾರ ಅಸ್ತಿತ್ವದಲ್ಲಿದೆಯೇ? ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ಗಳನ್ನು ಮಾಡಿರುವ ಅವರು, ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ, ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರದಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ. ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ ಮುಖ್ಯಮಂತ್ರಿ ಗಮನ ಹರಿಸಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.
ಆಸ್ಪತ್ರೆಯಲ್ಲಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು. ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳುಹಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು ಎಂದು ಅವರು ಹೇಳಿದ್ದಾರೆ.
ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ. ಹಳೆಯ ಹಾನಿಯ ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ. ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರಕಾರ ಸ್ಪಂದಿಸಿಲ್ಲ. ರಾಜ್ಯ ಸರಕಾರದ ಈ ನಿರ್ಲಕ್ಷ್ಯಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ ಎಂದು ಸಿದ್ದರಾಮಯ್ಯ ಕಿಡಿಗಾರಿದ್ದಾರೆ.
ಕಳೆದರಡು ದಿನಗಳಿಂದ ರಾಜ್ಯಾದ್ಯಂತ ಸುರಿಯುತ್ತಿರುವ ಮಳೆ, ಏರುತ್ತಿರುವ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಕಷ್ಟದಲ್ಲಿರುವ ಜನರ ನೆರವಿಗೆ ಧಾವಿಸಬೇಕಾಗಿರುವ ಸರ್ಕಾರ ಸಂಪೂರ್ಣ ಸ್ಥಗಿತಗೊಂಡಿದೆ. ರಾಜ್ಯದಲ್ಲಿ ಸರ್ಕಾರ ಅಸ್ತಿತ್ವದಲ್ಲಿದೆಯೇ?
— Siddaramaiah (@siddaramaiah) August 6, 2020
1/5 pic.twitter.com/vqFB3NWc57
ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕದಲ್ಲಿಯೂ ಮಳೆಯಿಂದಾಗಿ ಜನ ಪ್ರವಾಹದ ಭೀತಿಯಲ್ಲಿದ್ದಾರೆ. ರಾಜ್ಯ ಸರ್ಕಾರ ತಕ್ಷಣ ಕಾರ್ಯಪ್ರವೃತ್ತವಾಗಿ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿ ಅವರಿಗೆ ಊಟ-ವಸತಿ ವ್ಯವಸ್ಥೆ ಕಲ್ಪಿಸಿ ಅವರಲ್ಲಿ ಧೈರ್ಯ ತುಂಬುವ ಕೆಲಸ ಮಾಡಬೇಕು.
— Siddaramaiah (@siddaramaiah) August 6, 2020
2/5#floods pic.twitter.com/3xFKNRppZl
ರಾಜ್ಯದ ಕಂದಾಯ ಸಚಿವರೂ ಕ್ವಾರಂಟೈನ್ಗೊಳಗಾಗಿದ್ದಾರೆಂದು ಹೇಳಲಾಗುತ್ತಿದೆ.
— Siddaramaiah (@siddaramaiah) August 6, 2020
ಪ್ರವಾಹ ನಿಯಂತ್ರಣ ಮತ್ತು ಪರಿಹಾರ ಕಾರ್ಯದಲ್ಲಿ ಕಂದಾಯ ಇಲಾಖೆಯ ಜವಾಬ್ದಾರಿ ಹೆಚ್ಚಿರುವುದರಿಂದ ಪೂರಕ ವ್ಯವಸ್ಥೆ ಮಾಡುವ ಬಗ್ಗೆ @CMofKarnataka ಅವರು ಗಮನ ಹರಿಸಬೇಕು.
3/5#floods
ಆಸ್ಪತ್ರೆಯಲ್ಲಿರುವ @CMofKarnataka ಅವರು ತಕ್ಷಣ ಹಿರಿಯ ಸಹದ್ಯೋಗಿಗಳಿಗೆ ಜವಾಬ್ದಾರಿ ಹಂಚಿ ಅತಿವೃಷ್ಟಿಯ ಸಮಸ್ಯೆಗಳಿಗೆ ಪರಿಹಾರವನ್ನು ಕಲ್ಪಿಸಲು ವ್ಯವಸ್ಥೆ ಮಾಡಬೇಕು.
— Siddaramaiah (@siddaramaiah) August 6, 2020
ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರನ್ನು ಸ್ಥಳಕ್ಕೆ ಕಳಿಸಿ ಪ್ರತ್ಯಕ್ಷದರ್ಶಿ ವರದಿಯನ್ನು ತರಿಸಿಕೊಳ್ಳಬೇಕು.
4/5#floods pic.twitter.com/qKyYCGQdWw
ಕಳೆದ ವರ್ಷದ ಆಗಸ್ಟ್-ಅಕ್ಟೋಬರ್ ತಿಂಗಳ ಪ್ರವಾಹದಿಂದ ಜನತೆ ಇನ್ನೂ ಚೇತರಿಸಿಕೊಂಡಿಲ್ಲ.
— Siddaramaiah (@siddaramaiah) August 6, 2020
ಹಳೆಯ ಹಾನಿಯ
ಪರಿಹಾರ ಕಾರ್ಯವೇ ಇನ್ನೂ ಪೂರ್ಣಗೊಂಡಿಲ್ಲ.
ನಿರಂತರವಾಗಿ ಈ ಬಗ್ಗೆ ನಾವು ಎಚ್ಚರಿಸುತ್ತಿದ್ದರೂ ಸರ್ಕಾರ ಸ್ಪಂದಿಸಿಲ್ಲ.
ರಾಜ್ಯ ಸರ್ಕಾರದ ಈ ನಿರ್ಲಕ್ಷಕ್ಕೆ ಅಮಾಯಕ ಜನ ಬಲಿಯಾಗುತ್ತಿದ್ದಾರೆ.
5/5#floods