ಡಿ.ಕೆ.ಶಿವಕುಮಾರ್ ಸೀಸನ್ ರಾಜಕಾರಣಿ: ಸಚಿವ ಬಿ.ಸಿ.ಪಾಟೀಲ್
ಬೆಂಗಳೂರು, ಸೆ.23: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಒಳಗೊಂದು, ಹೊರಗೊಂದು ಮಾತನಾಡುವುದು ಅಭ್ಯಾಸವಾಗಿ ಬಿಟ್ಟಿದೆ. ಶಿವಕುಮಾರ್ ಒಬ್ಬ ಸೀಸನ್ ರಾಜಕಾರಣಿ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಟೀಕಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಸದನದ ಒಳಗೆ ಬಿ.ಸಿ.ಪಾಟೀಲ್ ನನ್ನ ಆತ್ಮೀಯ ಸ್ನೇಹಿತ ಎಂದವರು ಸಂಜೆಹೊತ್ತಿಗೆ ತಮ್ಮ ಮಾತು ಬದಲಾಯಿಸಿದ್ದಾರೆ ಎಂದರು.
ಒಳಗೊಂದು, ಹೊರಗೊಂದು, ಕೊಠಡಿಯಲ್ಲೊಂದು ಮಾತನಾಡುವುದು ಶಿವಕುಮಾರ್ ಗೆ ಅಭ್ಯಾಸವಾಗಿದೆ. ಅವರು ತಮ್ಮ ತೆವಲಿಗೆ ಮಾತನಾಡುವುದನ್ನು ಬಿಡಲಿ ಎಂದು ಬಿ.ಸಿ.ಪಾಟೀಲ್ ತಿರುಗೇಟು ನೀಡಿದರು.
ಎಪಿಎಂಸಿ ಕಾಯ್ದೆಯಿಂದ ಯಾವುದೇ ನಷ್ಟವಿಲ್ಲ. ರೈತರಿಗೆ ಒಳ್ಳೆಯದೇ ಆಗಲಿದೆ. ರೈತರು ಯಾವ ಕಾರಣಕ್ಕಾಗಿ ಹೋರಾಟ ಮಾಡುತ್ತಿದ್ದಾರೆಂಬುದು ಸ್ಪಷ್ಟವಾಗಬೇಕು. ರೈತರು ತಮ್ಮ ಹೋರಾಟ ಕೈಬಿಡಬೇಕೆಂದು ಬಿ.ಸಿ.ಪಾಟೀಲ್ ಮನವಿ ಮಾಡಿದರು.
Next Story