ಹೊಸದಿಲ್ಲಿಯಲ್ಲಿ ಸುರೇಶ್ ಅಂಗಡಿ ಅಂತ್ಯಕ್ರಿಯೆ
ಹೊಸದಿಲ್ಲಿ ಸೆ.24:ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ, ಬೆಳಗಾವಿಯ ಹಿರಿಯ ಬಿಜೆಪಿ ಸಂಸದ ಸುರೇಶ್ ಅಂಗಡಿ(65) ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ನೆರವೇರಿತು.
ದಿಲ್ಲಿಯ ದ್ವಾರಕಾದ ಸೆಕ್ಟರ್ 24ರಲ್ಲಿರುವ ರುದ್ರ ಭೂಮಿಯಲ್ಲಿ ಕೋವಿಡ್-19 ಮಾರ್ಗ ಸೂಚಿಯ ನಿಯಮಾವಳಿಯ ಅನ್ವಯ ಅಂತ್ಯಕ್ರಿಯೆ ನಡೆಸಲಾಯಿತು.
ಪತ್ನಿ ಮಂಗಳಾ, ಪುತ್ರಿಯರು, ಅಳಿಯಂದಿರು, ಸಂಬಂಧಿಕರು, ಬೀಗರಾದ ಜಗದೀಶ್ ಶೆಟ್ಟರ್ ದಂಪತಿ, ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿ,ರಮೇಶ ಜಾರಕಿಹೊಳಿ, ವಿ.ಸೋಮಣ್ಣ, ಸಂಸದರು ಸೇರಿದಂತೆ ಆಪ್ತರು ಹಾಜರಿದ್ದರು. ಸಕಲ ಸರಕಾರಿ ಗೌರವದೊಂದಿಗೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಯಿತು.
Next Story