ಶಕ್ತಿ ಸೌಧದಲ್ಲಿ ಗುಜರಾತ್ ‘ಕೈ’ ಶಕ್ತಿಪ್ರದರ್ಶನ
ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ಶಾಸಕರು ಎರಡು ಬಸ್ಗಳಲ್ಲಿ ರಾಜಭವನಕ್ಕೆ ಆಗಮಿಸಿ, ರಾಜ್ಯಪಾಲ ವಜೂಭಾಯಿ ವಾಲಾ ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಆನಂತರ ಶಕ್ತಿ ಕೇಂದ್ರ ವಿಧಾನಸೌಧಕ್ಕೆ ಭೇಟಿ ನೀಡಿ, ಶಿವಕುಮಾರ್ ಅವರೊಂದಿಗೆ ಶಕ್ತಿ ಪ್ರದರ್ಶನ ಮಾಡಿದರು. ಇದೇ ಸಂದರ್ಭದಲ್ಲಿ ವಿಧಾನಸೌಧ ಹಾಗೂ ವಿಕಾಸಸೌಧದ ಮಧ್ಯೆ ಇರುವ ರಾಷ್ಟ್ರಪಿತ ಮಹಾತ್ಮಾ ಗಾಂಧಿಯವರ ಪುತ್ಥಳಿಗೆ ನಮನ ಸಲ್ಲಿಸಿ, ಗಾಂಧೀಜಿಯ ‘ರಘುಪತಿ ರಾಘವ ರಾಜಾರಾಂ’ ಪದ್ಯವನ್ನು ಎಲ್ಲರೂ ಒಕ್ಕೊರಳಿನಿಂದ ಹಾಡಿದರು. ಅನಂತರ ಗಾಂಧೀಜಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು.
Next Story