ಲಿಂಗಾಯತ ಸ್ವತಂತ್ರ ಧರ್ಮ...
ಲಿಂಗಾಯತ ಸಮುದಾಯಕ್ಕೆ ಸಾಂವಿಧಾನಿಕ ಮಾನ್ಯತೆಗಾಗಿ ಗುರುವಾರ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ತೋಂಟದಾರ್ಯ ಸಿದ್ದಲಿಂಗ ಮಹಾಸ್ವಾಮೀಜಿ ಅಧ್ಯಕ್ಷತೆಯಲ್ಲಿ ನಡೆದ ಸುದೀರ್ಘ ಸಮಾಲೋಚನಾ ಸಭೆಯಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಎಂದು ಈ ಬಗ್ಗೆ ‘ಲಿಂಗಾಯತ ಮಹಾ ಸಂಘ’ದ ನೇತೃತ್ವದಲ್ಲಿ ರಾಜ್ಯ ಹಾಗೂ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲು ಲಿಂಗಾಯತ ಸಮುದಾಯದ ಮಠಾಧೀಶರು, ಚಿಂತಕರು, ಮುಖಂಡರು ಒಮ್ಮತದ ನಿರ್ಧಾರಕ್ಕೆ ಬಂದಿದ್ದಾರೆ. ಸಭೆಯಲ್ಲಿ ವಿಧಾನ ಪರಿಷತ್ತಿನ ಸದಸ್ಯ ಬಸವರಾಜ ಹೊರಟ್ಟಿ, ಸಚಿವರಾದ ವಿನಯ್ ಕುಲಕರ್ಣಿ, ಎಂ.ಬಿ.ಪಾಟೀಲ್, ಶರಣ ಪ್ರಕಾಶ್ ಪಾಟೀಲ್, ಲಿಂಗಾಯತ ಸ್ವಾಮೀಜಿಗಳಾದ ಡಾ.ಸಿದ್ದರಾಮ ಮಹಾಸ್ವಾಮಿ, ಡಾ.ಬಸವಲಿಂಗಪಟ್ಟದೇವರು, ಜಯ ಬಸವ ಮೃತ್ಯುಂಜಯ ಮಹಾಸ್ವಾಮೀಜಿ, ಮಹಾಂತಪ್ಪಗಳವರು, ಮಲ್ಲಿಕಾರ್ಜುನ ಮಹಾಸ್ವಾಮಿ, ಶಿವರುದ್ರ ಮಹಾಸ್ವಾಮಿ ಮತ್ತಿತರರು ಇದ್ದರು.
Next Story