ಮೊಳಗಿದ ಲಿಂಗಾಯತ ಧರ್ಮದ ಕಹಳೆ...!
ಲಿಂಗಾಯತ ಸ್ವತಂತ್ರ ಧರ್ಮಕ್ಕಾಗಿ ಆಗ್ರಹಿಸಿ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಹಾಗೂ ನೂರಾರು ಮಠಾಧೀಶರ ನೇತೃತ್ವದಲ್ಲಿ ಹೈದರಾಬಾದ್ ಕರ್ನಾಟಕ ಭಾಗದ ಬಿಸಿಲ ನಾಡು ಕಲಬುರಗಿ ಜಿಲ್ಲೆಯ ಎನ್.ವಿ. ವೆೆುದಾನದಲ್ಲಿ ರವಿವಾರ ನಡೆದ ಬೃಹತ್ ಸಮಾವೇಶದಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಸ್ವತಂತ್ರ ಧರ್ಮಕ್ಕಾಗಿ ಆಗ್ರಹಿಸಿ ಕಳೆದ ಎರಡು ತಿಂಗಳಲ್ಲಿ ಲಿಂಗಾಯತ ಸಮುದಾಯ ನಡೆಸುತ್ತಿರುವ ನಾಲ್ಕನೆ ಬೃಹತ್ ಸಮಾವೇಶ ಇದಾಗಿದ್ದು, ಈ ಹಿಂದೆ ಬೀದರ್, ಬೆಳಗಾವಿ ಹಾಗೂ ಮಹಾರಾಷ್ಟ್ರದ ಲಾತೂರ್ನಲ್ಲಿ ಸಮಾವೇಶಗಳನ್ನು ಆಯೋಜಿಸಲಾಗಿತ್ತು. ಹೈದರಾಬಾದ್ ಕರ್ನಾಟಕ ವಿಭಾಗ, ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯಗಳಿಂದ ಸಮಾವೇಶದಲ್ಲಿ ಪಾಲ್ಗೊಳ್ಳಲು ಸಾವಿರಾರು ವಾಹನಗಳಲ್ಲಿ ಎರಡು ಲಕ್ಷಕ್ಕೂ ಅಧಿಕ ಮಂದಿ ಬಸವ ಅನುಯಾಯಿಗಳು ಆಗಮಿಸಿದ್ದರು.
Next Story