ಶುಕ್ರವಾರ ಸಂಜೆ ಬೆಂಗಳೂರಿನಲ್ಲಿ ಸುರಿದ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಗೆ ದಂಪತಿ ಸೇರಿ ಐವರು ಮೃತಪಟ್ಟಿದ್ದಾರೆ. ನಗರದ ಬಹುಪಾಲು ತಗ್ಗು ಪ್ರದೇಶಗಳ ಮನೆಗಳಲ್ಲಿ ಮಳೆ ನೀರು ನುಗ್ಗಿದ್ದು, ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ರಸ್ತೆಯಲ್ಲಿ ವಾಹನಗಳು ಮಳೆ ನೀರಿಗೆ ಸಿಕ್ಕಿ ಸವಾರರು ಪರದಾಡುವಂತಾಯಿತು.