ರುಪೇ ಕಾರ್ಡ್ ವಿತರಣೆ...
ಉಜಿರೆಯ ಶ್ರೀ ಧರ್ಮಸ್ಥಳ ರತ್ನವರ್ಮ ಹೆಗ್ಗಡೆ ಕ್ರೀಡಾಂಗಣದಲ್ಲಿ ರವಿವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಸದಸ್ಯರ ಸಮಾವೇಶ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಸ್ವಸಹಾಯ ಸಂಘದ ಸದಸ್ಯೆಯರಾದ ಶಾಲಿನಿ ಮತ್ತು ಶಕಿಲಾ ಬಾನು ಅವರಿಗೆ ಸಾಂಕೇತಿಕವಾಗಿ ರುಪೇ ಕಾರ್ಡ್ ವಿತರಿಸಿದರು. ಸ
ಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಡಾ.ವೀರೇಂದ್ರ ಹೆಗ್ಗಡೆ ಶಾಲು, ಸ್ಮರಣಿಕೆ ಹಾಗೂ ಪೇಟ ತೊಡಿಸಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಡಾ.ಹೆಗ್ಗಡೆಯವರನ್ನು ಮೋದಿ ಸನ್ಮಾನಿಸಿದರು. ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡ, ಅನಂತ ಕುಮಾರ್, ಸಂಸದರಾದ ಬಿ.ಎಸ್.ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲು, ಶಾಸಕ ವಸಂತ ಬಂಗೇರ, ಹೇಮಾವತಿ ಹೆಗ್ಗಡೆ ಮತ್ತಿತರರು ಉಪಸ್ಥಿತರಿದ್ದರು.
Next Story