ಪ್ರತಿಪಕ್ಷಗಳ ಮೆಗಾ ರ್ಯಾಲಿ
ತೃಣಮೂಲ ಕಾಂಗ್ರೆಸ್ ನೇತೃತ್ವದಲ್ಲಿ ಶನಿವಾರ ಕೋಲ್ಕತಾದಲ್ಲಿ ನಡೆದ ಬೃಹತ್ ಸಮಾವೇಶದಲ್ಲಿ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಲೋಕಸಭೆಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ, ಡಿಎಂಕೆ ವರಿಷ್ಠ ಎಂ.ಕೆ. ಸ್ಟಾಲಿನ್, ಎನ್ಸಿಪಿ ನಾಯಕ ಶರದ್ ಪವಾರ್, ಎಲ್ಜೆಡಿ ವರಿಷ್ಠ ಶರದ್ ಯಾದವ್, ಬಿಎಸ್ಪಿ ಪ್ರಧಾನ ಕಾರ್ಯದರ್ಶಿ ಸತೀಶ್ ಚಂದ್ರ ಮಿಶ್ರಾ, ಎಸ್ಪಿ ಅಧ್ಯಕ್ಷ ಅಖಿಲೇಶ್ ಯಾದವ್, ನ್ಯಾಶನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ, ಬಿಜೆಪಿ ಹಿರಿಯ ನಾಯಕರಾದ ಶತ್ರುಘ್ನ ಸಿನ್ಹಾ, ಯಶವಂತ ಸಿನ್ಹಾ ಮತ್ತಿತರ ನಾಯಕರು ವೇದಿಕೆಯಲ್ಲಿ ಪರಸ್ಪರ ಕೈಜೋಡಿಸಿ ಒಗ್ಗಟ್ಟು ಪ್ರದರ್ಶಿಸಿದರು.
Next Story