ಮತದಾನ ಬಹಿಷ್ಕಾರ..
ಜನ ಪ್ರತಿನಿಧಿಗಳು ಗ್ರಾಮದ ಅಭಿವೃದ್ಧಿಗೆ ಒತ್ತು ನೀಡದ ಕಾರಣವನ್ನು ಮುಂದಿಟ್ಟು ಹಾಸನ, ಚಿತ್ರದುರ್ಗ, ಮಂಡ್ಯ, ಚಾಮರಾಜನಗರ ಹಾಗೂ ಚಿಕ್ಕಮಗಳೂರು ಸೇರಿದಂತೆ ವಿವಿಧ ಕಡೆಗಳಲ್ಲಿ ಮತದಾರರು ಮತದಾನವನ್ನು ಬಹಿಷ್ಕಾರ ಮಾಡಿದ್ದು ಜನಪ್ರತಿನಿಧಿಗಳು ಹಾಗೂ ಚುನಾವಣಾ ಅಧಿಕಾರಿಗಳ ತಲೆನೋವಿಗೆ ಕಾರಣವಾಗಿತ್ತು. ರಾಜ್ಯದೆಲ್ಲೆಡೆ ಲೋಕಸಭಾ ಚುನಾವಣೆ ಗರಿಗೆದರಿದೆ. ಪ್ರಮುಖ ನಾಯಕರು, ಸಿನೆಮಾ ನಟ ನಟಿಯರು ಸೇರಿದಂತೆ ಸಾಮಾನ್ಯ ಜನ ಮತಗಟ್ಟೆಗಳ ಬಳಿ ಸಾಲುಗಟ್ಟಿ ನಿಂತು ಮತ ಚಲಾಯಿಸಿದರು. ಆದರೆ, ರಾಜ್ಯದ ಕೆಲವೆಡೆ ತಮ್ಮ ಗ್ರಾಮ ಅಭಿವೃದ್ಧಿಯಾಗದೆ ತಾವು ಮತಚಲಾಯಿಸುವುದಿಲ್ಲ ಎಂದು ಜನ ಸಾಮಾನ್ಯರು ಮತದಾನ ಬಹಿಷ್ಕರಿಸುವ ಮೂಲಕ ಜನಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸುವ ಕೆಲಸಕ್ಕೆ ಮುಂದಾಗಿದ್ದರು.
Next Story