ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮಂಗಳವಾರ ನಡೆದ ಎರಡನೇ ಹಂತದ ಚುನಾವಣೆಯಲ್ಲಿ ಬಿರುಬಿಸಿಲನ್ನೂ ಲೆಕ್ಕಿಸದರೆ ಮತದಾರರು ತಮ್ಮ ಮತ ಚಲಾಯಿಸಿದರು. ಅದರಲ್ಲೂ ವಿಶೇಷವಾಗಿ ನಡೆದಾಡಲು ಅಶಕ್ತರಾದ ವಯೋವೃದ್ಧರು, ವಿಕಲ ಚೇನತರು ತಮ್ಮವರ ಜೊತೆಗೆ ಗಾಲಿ ಕುರ್ಚಿಯಲ್ಲಿ ಬಂದು ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸಿ ಎಲ್ಲರಿಗೂ ಮಾದರಿಯಾಗಿದ್ದಾರೆ.