ಮತದಾನ ಬಹಿಷ್ಕಾರ ಹಿಂತೆಗೆದ ಬೆಳ್ಳೆ-ಕಟ್ಟಿಂಗೇರಿ ಗ್ರಾಮಸ್ಥರು
ಶಿರ್ವ: ಮೂಡುಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಟ್ಟಿಂಗೇರಿ ವಾರ್ಡ್ ಒಂದರ ಗ್ರಾಮಸ್ಥರು ಮತದಾನ ಬಹಿಷ್ಕಾರ ಮಾಡುವ ನಿರ್ಣಯವನ್ನು ವಾಪಾಸ್ಸು ಪಡೆದುಕೊಂಡಿದ್ದಾರೆ.
ವಾರ್ಡ್ನ ಅಕ್ಷರ ಕರಾವಳಿ ರಸ್ತೆಯ ಅವ್ಯವಸ್ಥೆಯ ವಿರುದ್ಧ, ಸ್ಥಳೀಯ ಮತದಾರರು ಹಾಗೂ ಸಾರ್ವಜನಿಕರು ಒಟ್ಟು ಸೇರಿ ಕೊಂಡು ಮತದಾನ ಬಹಿಷ್ಕಾರ ಮಾಡುವುದಾಗಿ ನಿರ್ಣಯ ಕೈಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ರವಿವಾರ ಸ್ಥಳಕ್ಕೆ ಭೇಟಿ ನೀಡಿ, ಅಲ್ಲಿಯ ಮತದಾರರು ಮತ್ತು ಸಾರ್ವಜನಿಕರೊಂದಿಗೆ ಮಾತುಕತೆ ನಡೆಸಿದರು.
ಸ್ಥಳೀಯರ ಅಪೇಕ್ಷಿತ ರಸ್ತೆ ಕಾಮಗಾರಿಯ ಬಗ್ಗೆ ರಾಜ್ಯ ಸರಕಾರದ ಲೋಕೋ ಪಯೋಗಿ ಇಲಾಖೆಯ ಸಚಿವರ ಮಂಜೂ ರಾತಿ ಕಾಮಗಾರಿ ಪಟ್ಟಿಯಲ್ಲಿ ಈಗಾಗಲೇ ನಮೂದಾಗಿದ್ದು, ಮಂಜೂರಾದ ತಕ್ಷಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗು ವುದು ಎಂದು ಅವರು ಭರವಸೆ ನೀಡಿದರು.
ಅದರಂತೆ ಮತದಾರರು ಚುನಾವಣಾ ಬಹಿಷ್ಕಾರ ಹಿಂಪಡೆದು ಮತದಾನ ದಲ್ಲಿ ಭಾಗವಹಿಸಲು ಸಮ್ಮತಿ ಸೂಚಿಸಿದ್ದಾರೆ ಎಂದು ಬೆಳ್ಳೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರುಗಳಾದ ಶಿವಾಜಿ ಸುವರ್ಣ ಬೆಳ್ಳೆ ಹಾಗೂ ರಂಜನಿ ಹೆಗ್ಡೆ ಜಂಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.