ಎ.20ರಂದು ಸಮಾನ ಮನಸ್ಕರ ರಾಜಕೀಯ ಸಮಾವೇಶ
ಪುತ್ತೂರು: ಸಿಪಿಐಎಂ, ಆಮ್ ಆದ್ಮಿ ಪಾರ್ಟಿ, ದಲಿತ ಸಂಘಟನೆಗಳು, ರೈತ ಸಂಘಟನೆಗಳು ಮತ್ತು ಕಾರ್ಮಿಕ ಸಂಘಟನೆ ಗಳ ಜಂಟಿ ಆಶ್ರಯದಲ್ಲಿ ಎ. 20ರಂದು ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಲಯನ್ಸ್ ಸಭಾ ಭವನದಲ್ಲಿ ಸಮಾನ ಮನಸ್ಕ ರಾಜಕೀಯ ಸಮಾವೇಶ ನಡೆಯಲಿದೆ. `ಸಂವಿಧಾನ ರಕ್ಷಿಸಿ- ದೇಶ ಉಳಿಸಿ' ಎಂಬ ಘೋಷ ವಾಕ್ಯದೊಂದಿಗೆ ಸಮಾವೇಶ ಆಯೋಜಿಸಲಾಗಿದೆ.
ಸಿಪಿಐಎಂ ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಡಾ.ಕೆ.ಪ್ರಕಾಶ್, ಆಮ್ಆದ್ಮಿ ಪಾರ್ಟಿಯ ಜಿಲ್ಲಾಧ್ಯಕ್ಷ ಡಾ.ಬಿ.ಕೆ. ವಿಶುಕುಮಾರ್, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿಗಳಾದ ಕೆ. ಯಾದವ ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ, ಸಿಪಿಐಎಂ ಪಕ್ಷದ ಮುಖಂಡರಾದ ನ್ಯಾಯವಾದಿ ಬಿ.ಎಂ. ಭಟ್, ಕಡಬ ತಾಲೂಕು ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ಕೆ.ಪಿ. ಮೋಹನ್ ಪ್ರಧಾನ ಭಾಷಣ ಮಾಡಲಿದ್ದಾರೆ ಎಂದು ಸಮಾನ ಮನಸ್ಕರ ವೇದಿಕೆ ಪುತ್ತೂರು ಇದರ ಸಂಚಾಲಕರಾದ ನ್ಯಾಯವಾದಿ ಪಿ.ಕೆ. ಸತೀಶನ್ ಮತ್ತು ಕೆ ಉದಯಶಂಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story