ಸಫಾಯಿ ಕರ್ಮಚಾರಿಗಳಿಗೆ ವಿವಿಧ ಸೌಲಭ್ಯ: ಅರ್ಜಿ ಆಹ್ವಾನ
ಮಂಗಳೂರು, ಮೇ 8: ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ನಿಗಮದ ವತಿಯಿಂದ ಸಫಾಯಿ ಕರ್ಮಚಾರಿ/ಮ್ಯಾನ್ಯುಯಲ್ ಸ್ಸ್ಯಾವೆಂಜರ್ ಮತ್ತವರ ಕುಟುಂಬದ ಅವಲಂಬಿತರಿಗಾಗಿ ಸ್ವಯಂ ಉದ್ಯೋಗ ಯೋಜನೆ, ಸಮೃದ್ಧಿ ಯೊಜನೆ, ಉನ್ನತಿ ಯೋಜನೆ, ಐರಾವರ ಯೋಜನೆ, ಪ್ರೇರಣಾ ಯೋಜನೆ, ಸ್ಪೂರ್ತಿ ಯೋಜನೆ, ಗಂಗಾ ಕಲ್ಯಾಣ ಹಾಗೂ ಭೂ ಒಡೆತನ ಯೋಜನೆಗಳಿಗೆ 2019-20ನೇ ಸಾಲಿನ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ವೆಬ್ಸೈಟ್ www.ksskdc.kar.nic.in ಪರಿಶೀಲಿಸಬಹುದು. ಅರ್ಜಿ ಸಲ್ಲಿಸಲು ಮೇ 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ, ಜಿಎಚ್ಎಸ್ ರಸ್ತೆ, ಜನತಾ ಬಝಾರ್ ಕಟ್ಟಡ, 2ನೇ ಮಹಡಿ, ಹಂಪನಕಟ್ಟೆ, ಮಂಗಳೂರು ಅಥವಾ ದೂ.ಸಂ: 0824-2420114ನ್ನು ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟನೆ ತಿಳಿಸಿದೆ.
Next Story