ಮುರಳೀಧರ ಆಚಾರ್ಯ
ಉಡುಪಿ, ಅ.8: ಸಿಂಡಿಕೇಟ್ ಬ್ಯಾಂಕಿನಲ್ಲಿ ಅಸಿಸ್ಟೆಂಟ್ ಮೆನೇಜರ್ ಆಗಿ ನಿವೃತ್ತರಾಗಿದ್ದ ಪುತ್ತೂರು ಮುರಳೀಧರ ಆಚಾರ್ಯ (77) ಗುರುವಾರ ನಿಧನರಾದರು. ಅವರು ಪತ್ನಿ, ಇಬ್ಬರು ಪುತ್ರರು, ಓರ್ವ ಪುತ್ರಿ ಹಾೂ ಬಂಧು ಬಳಗವನ್ನು ಅಗಲಿದ್ದಾರೆ.
ಉಡುಪಿಯ ಯಕ್ಷಗಾನ ಕಲಾರಂಗದ ಆಜೀವ ಪೋಷಕ ಸದಸ್ಯರಾಗಿದ್ದ ಆಚಾರ್ಯರ ನಿಧನಕ್ಕೆ ಯಕ್ಷಗಾನ ಕಲಾರಂಗ ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್ ಹಾಗು ಕಾರ್ಯದರ್ಶಿ ಮುರಲಿ ಕಡೆಕಾರ್ ಸಂತಾಪ ವ್ಯಕ್ತ ಪಡಿಸಿದ್ದಾರೆ.
Next Story