ಲೋಕ ಜನಶಕ್ತಿ ಪಕ್ಷ ಅಧಿಕಾರಕ್ಕೆ ಬಂದರೆ ನಿತೀಶ್ ಕುಮಾರ್ ಜೈಲಿಗೆ: ಚಿರಾಗ್ ಪಾಸ್ವಾನ್
ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಲೋಕಜನಶಕ್ತಿ ಪಕ್ಷ(ಎಲ್ಜೆಪಿ)ಅಧಿಕಾರಕ್ಕೆ ಬಂದರೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಜೈಲಿಗಟ್ಟಲಾಗುವುದು ಎಂದು ಪಕ್ಷದ ಅಧ್ಯಕ್ಷ ಚಿರಾಗ್ ಪಾಸ್ವಾನ್ ಎಚ್ಚರಿಸಿದ್ದಾರೆ.
ಇತ್ತೀಚೆಗೆ ನಿಧನರಾಗಿರುವ ಮಾಜಿ ಕೇಂದ್ರ ಸಚಿವ ರಾಮ್ವಿಲಾಸ್ ಪಾಸ್ವಾನ್ರ ಪುತ್ರ ಚಿರಾಗ್ ಪಾಸ್ವಾನ್ ಎನ್ಡಿಎ ಮೈತ್ರಿಕೂಟದ ಪಕ್ಷದ ಜೆಡಿಯು ವಿರುದ್ಧ ಅವಕಾಶ ಸಿಕ್ಕಿದಾಗಲೆಲ್ಲಾ ವಾಗ್ದಾಳಿ ನಡೆಸುತ್ತಾ ಬಂದಿದ್ದು, ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ರವಿವಾರ ನಡೆದ ಚುನಾವಣಾ ರ್ಯಾಲಿಯೊಂದರಲ್ಲಿ ನಿತೀಶ್ ಕುಮಾರ್ ವಿರುದ್ಧ ಕಿಡಿಕಾರಿದರು.
ಈ ಮುಖ್ಯಮಂತ್ರಿ ಭ್ರಷ್ಟ, ಯುವಕರ ವಿರೋಧಿಯಾಗಿದ್ದು, ಬಿಹಾರವನ್ನು ನಾಶ ಮಾಡಿದ್ದಾರೆ. ಇಂತಹ ಮುಖ್ಯಮಂತ್ರಿ ನಮಗೆ ಬೇಕೆ? ಇಂತಹ ಮುಖ್ಯಮಂತ್ರಿಯನ್ನು ಬದಲಿಸಬೇಕೆ, ಬೇಡವೇ ಎಂದು ತನ್ನ ಭಾಷಣದಲ್ಲಿ ಚಿರಾಗ್ ಪ್ರಶ್ನಿಸಿದರು.
Next Story