ಅಡುಗೆ ಸಿಲಿಂಡರ್ ಸ್ಫೋಟ: ಸುಟ್ಟು ಕರಕಲಾದ ಬೈಕ್
ಬೆಂಗಳೂರು, ಅ.27: ಅಡುಗೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯಲ್ಲಿನ ವಸ್ತುಗಳೆಲ್ಲ ಛಿದ್ರವಾದ ಘಟನೆ ನಗರದ ಉಳ್ಳಾಲ ಸಮೀಪದ ಮುನೇಶ್ವರ ಬ್ಲಾಕ್ನಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಅದೃಷ್ಟವಶಾತ್ ಮನೆಯಲ್ಲಿ ಯಾರೂ ಇರದ ವೇಳೆ ಸ್ಫೋಟಗೊಂಡಿದ್ದು, ಸ್ಫೋಟದ ರಭಸಕ್ಕೆ ಮನೆಯ ವಸ್ತುಗಳೆಲ್ಲ ಛಿದ್ರವಾಗಿವೆ ಎನ್ನಲಾಗಿದೆ.
ಘಟನೆ ಸಂಬಂಧ ಸ್ಥಳಕ್ಕೆ ಜ್ಞಾನಭಾರತಿ ಠಾಣಾ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯ ಮಾಡಿದರು. ಇನ್ನು, ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಫೋಟದ ಪರಿಣಾಮ ಬೈಕ್ ಒಂದು ಸುಟ್ಟು ಕರಕಲಾಗಿದೆ ಎಂದು ತಿಳಿದುಬಂದಿದೆ.
Next Story