ಮೂರೂರು ವಿಷ್ಣು ಭಟ್ಟರಿಗೆ ಚಿಟ್ಟಾಣಿ ಪ್ರಶಸ್ತಿ, ಅಜಿತ್ ಕುಮಾರ್ಗೆ ಟಿ.ವಿ.ರಾವ್ ಪ್ರಶಸ್ತಿ
ಉಡುಪಿ, ಅ.28: ಉಡುಪಿಯ ಚಿಟ್ಟಾಣಿ ಅಭಿಮಾನಿ ಬಳಗ ಕಳೆದ ಏಳು ವರ್ಷಗಳಿಂದ ನೀಡುತ್ತಾ ಬಂದಿರುವ ಪದ್ಮಶ್ರೀ ಚಿಟ್ಟಾಣಿ ರಾಮಚಂದ್ರ ಹೆಗಡೆ ಪ್ರಶಸ್ತಿಗೆ ಈ ಬಾರಿ ಹಿರಿಯ ಯಕ್ಷಗಾನ ಸ್ತ್ರೀವೇಷಧಾರಿ ಮೂರು ವಿಷ್ಣು ಭಟ್ಟರನ್ನು ಆಯ್ಕೆ ಮಾಡಲಾಗಿದೆ.
ಅಲ್ಲದೇ ಚಿಟ್ಟಾಣಿ ಅಭಿಮಾನಿ ಬಳಗದ ಗೌರವಾಧ್ಯಕ್ಷರಾಗಿದ್ದ ಟಿ.ವಿ.ರಾವ್ ಅವರ ನೆನಪಿನಲ್ಲಿ ನೀಡುವ ಟಿ.ವಿ.ರಾವ್ ಪ್ರಶಸ್ತಿಗೆ ಹವ್ಯಾಸಿ ಹಿಮ್ಮೇಳ ವಾದಕ ಹಾಗೂ ಯಕ್ಷ ಕಲಾವಿದ ಅಜಿತ್ಕುಮಾರ್ ಅಂಬಲಪಾಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಎರಡು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನ.7ರಂದು ಸಂಜೆ 5:15ಕ್ಕೆ ಶ್ರೀಕೃಷ್ಣ ಮಠದ ರಾಜಾಂಗಣದಲ್ಲಿ ಸಂಪನ್ನಗೊಳ್ಳಲಿದೆ. ಪರ್ಯಾಯ ಶ್ರೀ ಅದಮಾರು ಮಠಾಧೀಶ ಶ್ರೀಈಶಪ್ರಿಯ ತೀರ್ಥಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹ ಸಂದೇಶ ನೀಡಲಿದ್ದಾರೆ ಎಂದು ಅಭಿಮಾನಿ ಬಳಗದ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಮತ್ತು ಕಾರ್ಯದರ್ಶಿ ಎಂ. ಗೋಪಿಕೃಷ್ಣ ರಾವ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story