ಅಧಿವೇಶನದಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ: ಸಚಿವ ಪ್ರಭು ಚೌಹಾಣ್
ಬೆಂಗಳೂರು, ನ. 27: ಡಿಸೆಂಬರ್ 7ರಿಂದ ಆರಂಭಗೊಳ್ಳಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ರಾಜ್ಯದಲ್ಲಿ ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣೆ ಮಸೂದೆ ಮಂಡಿಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಇಂದಿಲ್ಲಿ ತಿಳಿಸಿದ್ದಾರೆ.
ಶುಕ್ರವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜಾನುವಾರುಗಳ ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಪರಿಷ್ಕೃತ ಹಾಗೂ ಸಮಗ್ರ ಮಸೂದೆಯನ್ನು ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸುವುದಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ತಿಳಿಸಿದರು.
ಜಾನುವಾರು ಹತ್ಯೆ ನಿಷೇಧ ಮತ್ತು ಸಂರಕ್ಷಣೆ ಮಸೂದೆಯನ್ನು 2010ರಲ್ಲಿ ರಾಜ್ಯ ಸರಕಾರ ಅಂಗೀಕರಿಸಿ ಒಪ್ಪಿಗೆಗಾಗಿ ಕೇಂದ್ರ ಸರಕಾರಕ್ಕೆ ರವಾನಿಸಲಾಗಿತ್ತು. ಆದರೆ, ಅಂದಿನ ಯುಪಿಎ ಸರಕಾರ ಆ ಮಸೂದೆಯನ್ನು ತಿರಸ್ಕರಿಸಿತ್ತು. ಇದೀಗ ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ ಭರವಸೆ ಈಡೇರಿಸಲು ಸರಕಾರ ಬದ್ಧವಾಗಿದೆ ಎಂದು ಹೇಳಿದರು.
Next Story