ರಾಮಚಂದ್ರ ಪ್ರಭು
ಶಿರ್ವ, ಡಿ.5: ಬಂಟಕಲ್ಲು ಶ್ರೀದುರ್ಗಾಪರಮೇಶ್ವರೀ ದೇವಳದ ಆಡಳಿತಕ್ಕೆ ಒಳಪಟ್ಟ ಹಿ.ಪ್ರಾ.ಶಾಲೆಯಲ್ಲಿ 32ವರ್ಷಗಳ ಕಾಲ ಪದವೀಧರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದ ಕುರುಡಾ ಬಿ.ರಾಮಚಂದ್ರ ಪ್ರಭು(68) ಶುಕ್ರವಾರ ಸಂಜೆ ಹೃದಯಾಘಾತದಿಂದ ವುಣಿಪಾಲ ಆಸ್ಪತ್ರೆಯಲ್ಲಿ ನಿಧನರಾದರು.
ಇವರು ರಾಜಾಪುರ ಸಾರಸ್ವತ ಯುವ ಸಮಾಜದ ಸ್ಥಾಪಕ ಅಧ್ಯಕ್ಷರು, ಶ್ರೀದೇವಳದ ಆಡಳಿತ ಮಂಡಳಿ ಮಾಜಿ ಸದಸ್ಯರು, ಆರ್ಎಸ್ಬಿ ಯುವ ವೃಂದದ ಗೌರವ ಸಲಹೆಗಾರರು, ಉತ್ತಮ ವಾಲಿಬಾಲ್ ಕ್ರೀಡಾಪಟು ಆಗಿದ್ದರು. ಇವರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಮತ್ತು ಅಪಾರ ಬಂಧುಗಳನ್ನು ಅಗಲಿದ್ದಾರೆ.
Next Story