ಲೈಂಗಿಕ ಕಿರುಕುಳಕ್ಕೆ ಯತ್ನಿಸಿದವನ ಮೇಲೆ ಮಹಿಳೆ ಮಾರಕಾಸ್ತ್ರಗಳಿಂದ ಹಲ್ಲೆ: ಆರೋಪ
ಬೆಂಗಳೂರು, ಜ.18: ಲೈಂಗಿಕ ಕಿರುಕುಳಕ್ಕೆ ಯತ್ನಿಸಿದ ವ್ಯಕ್ತಿಯ ಮೇಲೆ ಮಹಿಳೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ ಘಟನೆ ನೆಲಮಂಗಲ ತಾಲೂಕಿನ ಶಾಂತಿನಗರದಲ್ಲಿ ನಡೆದಿದೆ ಎಂದು ವರದಿಯಾಗಿದೆ.
ಹಲ್ಲೆಯಿಂದ ಗಾಯಗೊಂಡಿರುವ ಆರೋಪಿ ಅಂಜನಾಮೂರ್ತಿ(35)ಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.
ರವಿವಾರ ಈ ಘಟನೆ ನಡೆದಿದ್ದು, ಬಲವಂತವಾಗಿ ಲೈಂಗಿಕ ಕ್ರಿಯೆಗೆ ಯತ್ನಿಸಿದ ಅಂಜನಾಮೂರ್ತಿಯ ಮೇಲೆ 27 ವರ್ಷದ ಮಹಿಳೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಬಳಿಕ ಆಂಜನಾಮೂರ್ತಿ ಕುಟುಂಬಸ್ಥರು ಮಹಿಳೆಗೆ ಹಲ್ಲೆ ನಡೆಸಿದ್ದು, ಹಲ್ಲೆಯಿಂದ ಆಕೆಯ ಕಾಲಿಗೆ ಗಂಭೀರವಾಗಿ ಗಾಯವಾಗಿದ್ದು, ಇಲ್ಲಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಈ ಸಂಬಂಧ ನೆಲಮಂಗಲ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
Next Story