ಯಾವುದೇ ಸಚಿವರ ಖಾತೆಗಳಲ್ಲಿ ಬದಲಾವಣೆ ಇಲ್ಲ: ಆರ್.ಅಶೋಕ್
ಬೆಂಗಳೂರು, ಜ.21: ಸದ್ಯಕ್ಕೆ ಯಾವುದೇ ಸಚಿವರ ಖಾತೆಗಳಲ್ಲಿ ಬದಲಾವಣೆ ಆಗುವುದಿಲ್ಲ. ಕೆಲವರ ಖಾತೆ ಬದಲಾವಣೆ ಆಗಿದೆ. ಈ ಸಂಬಂಧ ಸಚಿವರ ಜೊತೆ ಮುಖ್ಯಮಂತ್ರಿ ಮಾತನಾಡಿದ್ದಾರೆ. ಸಚಿವರೆಲ್ಲರೂ ಮುಖ್ಯಮಂತ್ರಿಯ ಮಾತು ಕೇಳಿದ್ದಾರೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ಗುರುವಾರ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲವನ್ನು ನಿಭಾಯಿಸಲು ಮುಖ್ಯಮಂತ್ರಿ ಸಮರ್ಥರಿದ್ದಾರೆ. ಸಂಪುಟ ವಿಸ್ತರಣೆ ಆದಾಗ ಇಂತಹ ಗೊಂದಲಗಳು ಸಹಜ ಎಂದರು.
ಮುಖ್ಯಮಂತ್ರಿ ಯಡಿಯೂರಪ್ಪ ಎಲ್ಲವನ್ನು ಸರಿ ಮಾಡುತ್ತಾರೆ. ಮಾಧುಸ್ವಾಮಿ ಮುಖ್ಯಮಂತ್ರಿಯಿಂದ ಅನುಮತಿ ಪಡೆದು ಸಚಿವ ಸಂಪುಟ ಸಭೆಗೆ ಗೈರು ಹಾಜರಾಗಿದ್ದರು. ಗೋಪಾಲಯ್ಯ ಹಾಗೂ ಎಂ.ಟಿ.ಬಿ.ನಾಗರಾಜ್ ನಮ್ಮ ಸಂಪರ್ಕದಲ್ಲಿದ್ದು ಸಮಸ್ಯೆ ಬಗೆಹರಿಸಲಾಗುವುದು ಎಂದು ಅವರು ಹೇಳಿದರು.
Next Story