ಬೆಂಗಳೂರು: ಚೌಡೇಶ್ವರಿ ದೇವಾಲಯ ತೆರವುಗೊಳಿಸಿದ ಪಾಲಿಕೆ ಅಧಿಕಾರಿಗಳು
ಬೆಂಗಳೂರು, ಜ.23: ಬಿಬಿಎಂಪಿ ಸ್ವತ್ತಿನ ಭೂಮಿಯನ್ನು ಒತ್ತುವರಿ ಮಾಡಿಕೊಂಡು ಇಲ್ಲಿನ ಬೆನ್ನಿಗಾನಹಳ್ಳಿಯಲ್ಲಿ ನಿರ್ಮಿಸಿದ್ದ ಶ್ರೀಚೌಡೇಶ್ವರಿ ದೇವಿಯ ದೇವಾಲಯವನ್ನು ಪಾಲಿಕೆ ಅಧಿಕಾರಿಗಳು ಶನಿವಾರ ತೆರವುಗೊಳಿಸಿದರು.
ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ಅವರ ನಿರ್ದೇಶನದಂತೆ ಮಹದೇವಪುರ ವಲಯದ ಜಂಟಿ ಆಯುಕ್ತರ ನೇತೃತ್ವದಲ್ಲಿ ಸಿಬ್ಬಂದಿ ತೆರವು ಕಾರ್ಯಾಚರಣೆ ಕೈಗೊಂಡರು.
ಕೆಆರ್ ಪುರ ವ್ಯಾಪ್ತಿಯಲ್ಲಿರುವ ಬೆನ್ನಿಗಾನಹಳ್ಳಿ ಗ್ರಾಮದ ಸರ್ವೆ ಸಂಖ್ಯೆ 82 ರಲ್ಲಿ 21ಗುಂಟೆ ಜಾಗದಲ್ಲಿ ಶ್ರೀ ಚೌಡೇಶ್ವರಿ ದೇವಾಲಯ ನಿರ್ಮಿಸಲಾಗಿತ್ತು. ಇದನ್ನು ತೆರವುಗೊಳಿಸಲಾಗಿದೆ ಎಂದು ಪಾಲಿಕೆ ತಿಳಿಸಿದೆ.
Next Story