ಆತ್ಮಹತ್ಯೆಗೆ ಯತ್ನಿಸಿದ್ದ ಕೊರೋನ ಸೋಂಕಿತ ಸಾವು
ಬೆಂಗಳೂರು, ಜ.25: ಆಸ್ಪತ್ರೆ ಕಿಟಕಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕೋವಿಡ್-19 ಸೋಂಕಿತ ವ್ಯಕ್ತಿಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ನೆಲಮಂಗಲ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಇಲ್ಲಿನ ಹನುಮಂತಗೌಡನಪಾಳ್ಯದ 42 ವರ್ಷದ ಸೋಂಕಿತ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ.
ಕೊರೋನ ಸೋಂಕಿಗೆ ತುತ್ತಾಗಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಜ.19 ರಂದು ಆಸ್ಪತ್ರೆಯ ಕಿಟಕಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದರು. ಇದೇ ವೇಳೆ ಗಂಭೀರ ಗಾಯಗೊಂಡಿದ್ದ ಸೋಂಕಿತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಸಾವನ್ನಪಿದ್ದಾರೆ ಎಂದು ವರದಿಯಾಗಿದೆ.
Next Story