ಕಡೂರು: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ
ಚಿಕ್ಕಮಗಳೂರು, ಫೆ.26: ಯುವಕನೋರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಾಸನ ಜಿಲ್ಲೆ ಅರಸೀಕೆರೆ ಪಟ್ಟಣದ ನಿವಾಸಿ ವಿಶ್ವಾಸ್(28) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರ ಮೃತದೇಹ ಕಡೂರು ಪಟ್ಟಣದ ಲಾಡ್ಜ್ ವೊಂದರಲ್ಲಿ ಪತ್ತೆಯಾಗಿದೆ. ಸಾಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ. ಈತ ವಿಷ ಸೇವನೆಯಿಂದ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಬಗ್ಗೆ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story