ಉಯ್ಯಾಲೆ ಆಟ : ಕುತ್ತಿಗೆಗೆ ಸೀರೆ ಸುತ್ತಿಕೊಂಡು ಬಾಲಕಿ ಮೃತ್ಯು
ಸುಳ್ಯ : ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಕುತ್ತಿಗೆಗೆ ಸೀರೆ ಸುತ್ತಿಕೊಂಡು ಬಾಲಕಿಯೋರ್ವಳು ಮೃತಪಟ್ಟ ಹೃದಯ ವಿದ್ರಾವಕ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಏನೆಕಲ್ಲು ಗ್ರಾಮದಲ್ಲಿ ನಡೆದಿದೆ.
ಏನೆಕಲ್ಲು ಗ್ರಾಮದ ಮುತ್ಲಾಜಡ್ಕ ನಿವಾಸಿ ಬಾಬು ಅಜಿಲ ಎಂಬವರ ಪುತ್ರಿ ಶೃತಿ (11) ಮೃತ ಬಾಲಕಿ.
ಶೃತಿ 5ನೇ ತರಗತಿಯಲ್ಲಿ ಓದುತ್ತಿದ್ದು ಇಂದು ಆಕೆಯ ಹುಟ್ಟು ಹಬ್ಬವಾಗಿದ್ದರಿಂದ ಶಾಲೆಗೆ ಹೋಗಿರಲಿಲ್ಲ. ಮನೆಯ ಸಮೀಪದ ಪೇರಳೆ ಮರಕ್ಕೆ ಸೀರೆಯನ್ನು ಕಟ್ಟಿ ಉಯ್ಯಾಲೆಯಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಸುಬ್ರಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story