ಬೆಳ್ತಂಗಡಿ: ಹೊಳೆಯಲ್ಲಿ ಮುಳುಗಿ ವ್ಯಕ್ತಿ ಮೃತ್ಯು
ಬೆಳ್ತಂಗಡಿ: ತೋಟತ್ತಾಡಿ ಗ್ರಾಮದ ಅರಂತಬೈಲು ಎಂಬಲ್ಲಿಯ ನಿವಾಸಿ ಕೃಷ್ಣಪ್ಪ ಮಲೆಕುಡಿಯ(45) ಎಂಬವರು ನೆರಿಯ ಹೊಳೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶನಿವಾರ ನಡೆದಿದೆ.
ನೆರಿಯ ಗ್ರಾಮದ ಪುಲ್ಲಾಜೆ ಬಳಿಯ ಎರ್ಮಯಿ ಗುಂಡಿಯಲ್ಲಿ ವ್ಯಕ್ತಿಯ ಮೃತದೇಹ ಶನಿವಾರ ಪತ್ತೆಯಾಗಿದೆ. ತೋಟತ್ತಾಡಿ ಗ್ರಾಮದ ಅರಂತಬೈಲು ನಿವಾಸಿ ಕೃಷ್ಣಪ್ಪ ಮಲೆಕುಡಿಯ ಅವರು ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಅಧವಾ ಇನ್ಯಾವುದೀ ಕಾರಣಕ್ಕ ನದಿ ಬದಿಗೆ ಹೋದಾಗ ಕಾಲು ಜಾರಿ ಹೊಳೆ ನೀರಿಗೆ ಬಿದ್ದು ಮೃತಪಟ್ಟಿರಬಹುದು ಎಂಬ ಅನುಮಾನ ವ್ಯಕ್ತವಾಗುತ್ತಿದೆ.
ಧರ್ಮಸ್ಥಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story