ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಯುವಕನ ಕೊಲೆ
ಬೆಂಗಳೂರು, ಎ.11: ಯುವಕನೋರ್ವನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆಗೈದಿರುವ ಘಟನೆ ಇಲ್ಲಿನ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಕಸ್ತೂರಿ ನಗರ ನಿವಾಸಿ ಸುನೀಲ್ ಎಂಬಾತ ಮೃತಪಟ್ಟಿದ್ದಾನೆ ಎಂದು ಪೊಲೀಸರು ಗುರುತಿಸಿದ್ದಾರೆ.
ಈ ಹಿಂದೆ ರೌಡಿಶೀಟರ್ ಸೋಮನ್ ಎಂಬಾತನ ಹತ್ಯೆ ಪ್ರಕರಣದಲ್ಲಿ ಸುನೀಲ್ ಭಾಗಿಯಾಗಿರುವ ಆರೋಪವಿದ್ದು, ಜೈಲಿಗೂ ಹೋಗಿದ್ದ. ಇದೇ ಕಾರಣಕ್ಕೆ ಆತನನ್ನು ದುಷ್ಕರ್ಮಿಗಳು ಕೊಲೆಗೈದಿರುವ ಶಂಕೆಯಿದ್ದು, ಘಟನೆ ಸಂಬಂಧ ಸ್ಥಳಕ್ಕೆ ಬ್ಯಾಟರಾಯನಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story