ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ವಾಪಸ್ಸಾಗುವವರಿಗೆ ಹೋಂ ಕ್ವಾರಂಟೈನ್, ಕೋವಿಡ್ ಟೆಸ್ಟ್ ಕಡ್ಡಾಯ: ಡಾ.ಸುಧಾಕರ್
ಬೆಂಗಳೂರು, ಎ.15: ಉತ್ತರಾಖಂಡದ ರಾಜ್ಯದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕವಾಗಿರಬೇಕು ಹಾಗೂ ಕೋವಿಡ್-19 ಪರೀಕ್ಷೆಗೆ ಒಳಪಡಬೇಕು ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಕುಂಭಮೇಳ ಮೇಳಕ್ಕೆ ತೆರಳಿ ಹಿಂದಿರುಗಿದವರು ಕೊರೋನ ಪರೀಕ್ಷೆ ವರದಿ ನೆಗಟಿವ್ ಬಂದ ನಂತರವಷ್ಟೇ ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕೆಂದು ಮನವಿ ಮಾಡಿದ್ದಾರೆ.
ಹರಿದ್ವಾರದಲ್ಲಿ ನಡೆಯುತ್ತಿರುವ ಪವಿತ್ರ ಕುಂಭಮೇಳದಲ್ಲಿ ಪಾಲ್ಗೊಂಡು ರಾಜ್ಯಕ್ಕೆ ಮರಳುವ ಯಾತ್ರಿಗಳು ವಾಪಸ್ಸಾದ ಬಳಿಕ ಕಡ್ಡಾಯವಾಗಿ ತಮ್ಮ ಮನೆಗಳಲ್ಲಿ ಪ್ರತ್ಯೇಕಗೊಂಡು ಕೊರೊನಾ ಪರೀಕ್ಷೆಗೆ ಒಳಪಡಬೇಕು. ಕೊರೊನಾ ಪರೀಕ್ಷೆ ವರದಿಯಲ್ಲಿ ನೆಗಟೀವ್ ಬಂದ ನಂತರವಷ್ಟೇ ಯಾತ್ರಿಕರು ತಮ್ಮ ಎಂದಿನ ಕಾರ್ಯಗಳಲ್ಲಿ ತೊಡಗಬೇಕೆಂದು ಮನವಿ ಮಾಡುತ್ತೇನೆ. pic.twitter.com/uDIhexR8aL
— Dr Sudhakar K (@mla_sudhakar) April 15, 2021
Next Story