ರಾಜ್ಯ ಮಟ್ಟದ ಕಮ್ಮಟಕ್ಕೆ ಅರ್ಜಿ ಆಹ್ವಾನ
ಉಡುಪಿ, ಎ.15: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಪ್ರಸ್ತುತ ಸಾಲಿನ ಜೂನ್ ತಿಂಗಳಿನಲ್ಲಿ ವಿಶೇಷ ಘಟಕ ಯೋಜನೆಯಡಿ ರಾಜ್ಯಮಟ್ಟದ 5 ದಿನಗಳ ಮಾಧ್ಯಮ ಪ್ರವೇಶಿಕೆ: ಬರಹ ಮತ್ತು ಸಂವಹನ ಕೌಶಲ ಕಮ್ಮಟವನ್ನು ನಡೆಸಲು ಅರ್ಹ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಎ.30 ಕೊನೆಯ ದಿನವಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ ಆದ -http://karnatakasahithyaacademy.org-ನಿಂದ ಪಡೆಯಬಹುದು ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ್ ಕರಿಯಪ್ಪ ಎನ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story