varthabharthi


ಕರ್ನಾಟಕ

ತಾಲೂಕು, ಜಿಲ್ಲಾ ಪಂಚಾಯತ್ ಗಳಿಗೆ ಆಡಳಿತಾಧಿಕಾರಿಗಳ ನೇಮಕಕ್ಕೆ ಸರಕಾರ ಆದೇಶ

ವಾರ್ತಾ ಭಾರತಿ : 27 Apr, 2021

ಬೆಂಗಳೂರು, ಎ. 27: ಕೋವಿಡ್ ಎರಡನೆ ಅಲೆ ಹಿನ್ನೆಲೆಯಲ್ಲಿ ಅವಧಿ ಮುಕ್ತಾಯಗೊಳ್ಳಲಿರುವ ರಾಜ್ಯದಲ್ಲಿನ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಗಳಿಗೆ ಚುನಾವಣೆ ಮುಂದೂಡಲು ಆಯೋಗಕ್ಕೆ ಶಿಫಾರಸ್ಸು ಮಾಡಿರುವ ಸರಕಾರ, ತಕ್ಷಣದಿಂದಲೇ ಜಾರಿಗೆ ಬರುವಂತೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ಮೇ-ಜೂನ್‍ನಲ್ಲಿ ಅವಧಿ ಮುಕ್ತಾಯಗೊಳ್ಳಲಿರುವ 30 ಜಿ.ಪಂ. ಹಾಗೂ ಹೊಸದಾಗಿ ರಚನೆಯಾಗಿರುವ ತಾಲೂಕುಗಳು ಸೇರಿ ಒಟ್ಟು 229 ತಾಲೂಕು ಪಂಚಾಯತ್ ಗಳಿಗೆ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಆಯಾ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿ.ಪಂ.ಗೆ, ಆಯಾ ತಾಲೂಕು ಪಂಚಾಯಿತಿ ಉಪ ಕಾರ್ಯದರ್ಶಿ ಅಥವಾ ಅದೇ ಶ್ರೇಣಿಯ ಅಧಿಕಾರಿಗಳನ್ನು ಆಡಳಿತಾಧಿಕಾರಿಯಾಗಿ ನೇಮಿಸಲು ಪ್ರಾದೇಶಿಕ ಆಯುಕ್ತರಿಗೆ ಅಧಿಕಾರ ನೀಡಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)