ಅಬ್ದುಲ್ ರಝಾಕ್ ಬೂಡಿಯಾರ್
ಪುತ್ತೂರು : ತಾಲೂಕಿನ ಕುರಿಯ ಗ್ರಾಮದ ಬೂಡಿಯಾರ್ ನಿವಾಸಿ ಅಬ್ದುಲ್ ರಹಿಮಾನ್ ಎಂಬವರ ಪುತ್ರ ಅಬ್ದುಲ್ ರಝಾಕ್(34) ಅಲ್ಪ ಅನಾರೋಗ್ಯದಿಂದ ರವಿವಾರ ಆಸ್ಪತ್ರೆಯಲ್ಲಿ ನಿಧನರಾದರು.
ವಿದೇಶದಲ್ಲಿ ಉದ್ಯೋಗದಲ್ಲಿದ್ದ ಅವರು ಬಳಿಕ ಬೆಂಗಳೂರು ಮತ್ತು ಇತರ ಕಡೆಗಳಲ್ಲಿ ಉದ್ಯೋಗ ಮಾಡಿಕೊಂಡಿದ್ದರು.
ಮೃತರು ತಂದೆ, ತಾಯಿ, ಪತ್ನಿ, ಓರ್ವ ಪುತ್ರ, ಮೂವರು ಸಹೋದರಿಯರು ಹಾಗೂ ಇಬ್ಬರು ಸಹೋದರರನ್ನು ಅಗಲಿದ್ದಾರೆ.
Next Story