ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆ: ಸಿಎಂ ಯಡಿಯೂರಪ್ಪ ಚಾಲನೆ
ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಆಯುಷ್ ಇಲಾಖೆ ಹಮ್ಮಿಕೊಂಡಿರುವ ಅಂತರ್ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಅಧಿಕೃತ ನಿವಾಸ ಕಾವೇರಿಯಲ್ಲಿ ಚಾಲನೆ ನೀಡಿದರು.
ಮನೆಯಲ್ಲೇ ಯೋಗ ಮಾಡಿ, ಸುರಕ್ಷಿತವಾಗಿರಿ ಎಂದು ಸಿಎಂ ಯಡಿಯೂರಪ್ಪ ಅವರು ಸಂದೇಶ ನೀಡಿದರು.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹಾಗು ಇತರರು ಈ ಸಂದರ್ಭ ಉಪಸ್ಥಿತರಿದ್ದರು.