ಮುಡಾ ಆಯುಕ್ತ ಡಾ.ಡಿ.ಬಿ. ನಟೇಶ್ ವರ್ಗಾವಣೆ ರದ್ದು
ಮೈಸೂರು, ಜೂ.21: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಡಾ. ಡಿ.ಬಿ.ನಟೇಶ್ ಅವರ ವರ್ಗಾವಣೆಯನ್ನು ಎರಡೇ ದಿನಕ್ಕೆ ರದ್ದುಪಡಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ನಟೇಶ್ ಅವರನ್ನು ವರ್ಗಾಯಿಸಿ ಶನಿವಾರ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಅವರ ಸ್ಥಾನಕ್ಕೆ ಶೀಲವಂತ ಎಂ.ಶಿವಕುಮಾರ್ ಅವರನ್ನು ನಿಯೋಜಿಸಲಾಗಿತ್ತು.
ಆದರೆ ಸೋಮವಾರ ಅವರ ವರ್ಗಾವಣೆ ಆದೇಶ ರದ್ದುಗೊಂಡಿದೆ ಎಂದು ತಿಳಿದು ಬಂದಿದೆ. ಮೈಸೂರಿನಲ್ಲಿ ಹಲವು ದಿನಗಳಿಂದ ಅಧಿಕಾರಿಗಳ ನಡುವಿನ ಕಚ್ಚಾಟ, ದಿಡೀರ್ ವರ್ಗಾವಣೆ ರದ್ದು ಹಲವು ಚರ್ಚೆಗೆ ಕಾರಣವಾಗಿದೆ.
Next Story