ಕುಕ್ಕಿಕಟ್ಟೆ ಸುರೇಶ್
ಉಡುಪಿ, ಜೂ.22: ಕಲಾಪೋಷಕ, ಉದ್ಯಮಿ ಕುಕ್ಕಿಕಟ್ಟೆ ನಿವಾಸಿ ಸುರೇಶ್ (50) ಮಂಗಳವಾರ ನಿಧನರಾದರು. ಅವರು ಪತ್ನಿ, ಪುತ್ರ, ಪುತ್ರಿ ಹಾಗೂ ಬಂಧುಗಳನ್ನು ಅಗಲಿದ್ದಾರೆ.
ಪಾರಂಪರಿಕ ತಿಂಡಿ-ತಿನಿಸುಗಳನ್ನು ತಯಾರಿಸುವಲ್ಲಿ ವಿಶೇಷ ಪ್ರಾವೀಣ್ಯತೆ ಹೊಂದಿದ್ದ ಇವರು ಕಳೆದ ನಾಲ್ಕು ವರ್ಷಗಳಿಂದ ಸ್ವಂತ ವೇಷಭೂಷಣ ಸಹಿತ ಶ್ರೀಕಲಾ ಸಂಗಮ ಯಕ್ಷಗಾನ ಮಕ್ಕಳ ಮೇಳವನ್ನು ಸ್ಥಾಪಿಸಿ ಎಳೆಯ ಮಕ್ಕಳಲ್ಲಿ ಯಕ್ಷಗಾನಾಸಕ್ತಿ ಮೂಡುವಲ್ಲಿ ಮಹತ್ತರ ಪಾತ್ರ ವಹಿಸಿದ್ದರು. ಯಕ್ಷಗಾನ ಕಲೆಯನ್ನು ಅತೀವ ಪ್ರೀತಿಸುತ್ತಿದ್ದ ಇವರು ಪ್ರತಿವರ್ಷ ವಿಶೇಷ ರೀತಿಯಲ್ಲಿ ಮೇಳದ ಯಕ್ಷಗಾನವನ್ನು ಆಯೋಜಿಸುತ್ತಾ,ಹಲವಾರು ಅಶಕ್ತರು, ಕಲಾವಿದರು, ಸಂಘಸಂಸ್ಥೆಗಳಿಗೆ, ಯಕ್ಷಗಾನ ಮಂಡಳಿಗಳಿಗೆ ಆರ್ಥಿಕ ನೆರವನ್ನು ನೀಡಿ ಪ್ರೋತ್ಸಾಹಿಸುತಿದ್ದರು.
Next Story