ಕರ್ನಾಟಕ
ಮೂಡಿಗೆರೆ: ಹೆದ್ದಾರಿಯಲ್ಲಿ ದರೋಡೆಗೆ ಸಂಚು; ನಾಲ್ವರ ಬಂಧನ

ಚಿಕ್ಕಮಗಳೂರು, ಜು.20: ಹೆದ್ದಾರಿಯಲ್ಲಿ ದರೋಡೆ, ಗ್ಯಾಂಗ್ ವಾರ್ ಗೆ ಸಂಚು ರೂಪಿಸುತ್ತಿದ್ದ ಆರೋಪದಲ್ಲಿ ನಾಲ್ವರು ಆರೋಪಿಗಳನ್ನು ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದಲ್ಲಿ ಮೂಡಿಗೆರೆ ಪೊಲೀಸರು ಬಂಧಿಸಿದ್ದಾರೆ.
ಮಂಡ್ಯದ ಶಿವಕುಮಾರ್, ಹಾಸನದ ಕುಮಾರಸ್ವಾಮಿ, ಜಾರ್ಖಂಡ್ ಮೂಲದ ಅಜಯ್ ಸಿಂಗ್, ಮೂಡಿಗೆರೆಯ ಶಿವಕುಮಾರ್ ಬಂಧಿತ ಆರೋಪಿಗಳಾಗಿದ್ದಾರೆ. ಬಂಧಿತರಿಂದ 2 ರಿವಾಲ್ವರ್, 30 ಗುಂಡು, ಡ್ರ್ಯಾಗನ್, ಎರಡು ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಜೂಜು ಅಡ್ಡೆಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುತ್ತಿದ್ದ ತಂಡ ಗಾಳಿಯಲ್ಲಿ ಗುಂಡು ಹಾರಿಸಿ ಹಣ ದೋಚುತ್ತಿದ್ದರು. ಗ್ಯಾಂಗ್ ವಾರ್ ನಡೆಸಲೂ ತಂಡ ಸಂಚು ರೂಪಿಸಿತ್ತು. ಕೃತ್ಯಕ್ಕಾಗಿ ಈ ತಂಡವು ಉತ್ತರ ಪ್ರದೇಶದಿಂದ ರಿವಾಲ್ವರ್ ಖರೀದಿಸಿತ್ತು ಎಂದು ಚಿಕ್ಕಮಗಳೂರು ಎಸ್ಪಿ ಅಕ್ಷಯ್ ಮಾಹಿತಿ ನೀಡಿದ್ದಾರೆ.
ದರೋಡೆಕೋರರನ್ನು ಬಂಧಿಸಿದ ಪೊಲೀಸ್ ತಂಡಕ್ಕೆ ಡಿಜಿ ಐಜಿಪಿ ಪ್ರವೀಣ್ ಸೂದ್ ಒಂದು ಲಕ್ಷ ರೂ. ಬಹುಮಾನ ಘೋಷಿಸಿದ್ದಾರೆ ಎಂದು ಎಸ್ಪಿ ತಿಳಿಸಿದ್ದಾರೆ.


‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ










