ಮುಂದಿನ ಜಿಪಂ/ತಾಪಂ ಚುನಾವಣೆಯಲ್ಲಿ ಎಎಪಿ ಸ್ಪರ್ಧೆ: ರೋಮಿ ಭಾಟಿ
ಮಂಗಳೂರು, ಆ.4: ಮುಂದಿನ ಜಿಪಂ/ತಾಪಂ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ ಎಂದು ಎಎಪಿ ರಾಜ್ಯ ಘಟಕದ ವೀಕ್ಷಕ ರೋಮಿ ಭಾಟಿ ಹೇಳಿದ್ದಾರೆ.
ನಗರದ ಪ್ರೆಸ್ಕ್ಲಬ್ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷವನ್ನು ರಾಜ್ಯಾದ್ಯಂತ ಬಲಪಡಿಸುವ ನಿಟ್ಟಿನಲ್ಲಿ ಅಲ್ಲಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ. ಇತರ ಪಕ್ಷಗಳು ಜಾತಿ ರಾಜಕಾರಣದಲ್ಲಿ ಮುಳುಗಿದ್ದು, ಅಭಿವೃದ್ಧಿ ಶೂನ್ಯವಾಗಿದೆ. ಆದ್ದರಿಂದ ಎಎಪಿ ಪರ ಜನತೆ ಧ್ವನಿಗೂಡಿಸಬೇಕು ಎಂದರು.
ಎಎಪಿ ರಾಜ್ಯ ಸಂಚಾಲಕ ವಿಜಯ ಶರ್ಮ ಮಾತನಾಡಿ, ರಾಷ್ಟ್ರ ರಾಜಕಾರಣದಲ್ಲಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆಮ್ ಆದ್ಮಿ ಪಕ್ಷವು ರಾಜ್ಯದಲ್ಲೂ ತನ್ನ ಸಂಘಟನೆಯನ್ನು ಚುರುಕುಗೊಳಿಸಿದೆ. ದ.ಕ. ಜಿಲ್ಲೆಯಲ್ಲಿ ಪಕ್ಷದ ಸಂಘಟನೆ ಮತ್ತು ಮುಂದಿನ ಚುನಾವಣೆಗಳಲ್ಲಿ ಎಎಪಿ ಪಾತ್ರದ ಕುರಿತು ಮತ್ತು ಪದಾಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ ವಿಸ್ತೃತ ಚರ್ಚೆ ನಡೆಸುವ ಸಲುವಾಗಿ ಜಿಲ್ಲೆಗೆ ಪಕ್ಷದ ದಿಲ್ಲಿ ನಿಯೋಗ ಪ್ರವಾಸ ಕೈಗೊಂಡಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಎಎಪಿ ರಾಜ್ಯ ಜಂಟಿ ಕಾರ್ಯದರ್ಶಿ ದರ್ಶನ್ ಜೈನ್, ದ.ಕ. ಮತ್ತು ಉಡುಪಿ ಜಿಲ್ಲಾ ವೀಕ್ಷಕ ಅಶೋಕ್ ಅಡಮಲೆ, ದ.ಕ. ಜಿಲ್ಲಾ ಸಂಚಾಲಕ ರಾಜೇಂದ್ರ ಕುಮಾರ್ ಉಪಸ್ಥಿತರಿದ್ದರು.