ಕರ್ನಾಟಕ
ಕೋವಿಡ್ ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಿಗೆ ಭೇಟಿ : ಸಿಎಂ ಬಸವರಾಜ ಬೊಮ್ಮಾಯಿ
ವಾರ್ತಾ ಭಾರತಿ : 9 Aug, 2021

ಬೆಂಗಳೂರು : ಸೋಂಕು ಹೆಚ್ಚಾಗಿರುವ ರಾಜ್ಯದ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನಲ್ಲಿ ಇಂದು ತಮ್ಮ ನಿವಾಸದ ಬಳಿ ಮೈಸೂರಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿ ಈ ವಿಷಯ ತಿಳಿಸಿದರು.
ನಾನು ಇಂದು ಮೈಸೂರಿಗೆ ಭೇಟಿ ನೀಡುತ್ತಿದ್ದೇನೆ. ಮೈಸೂರು ಜಿಲ್ಲೆಯಲ್ಲಿನ ಕೋವಿಡ್ ಪರಿಸ್ಥಿತಿ ಬಗ್ಗೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ. ಕೋವಿಡ್ ನಿಯಂತ್ರಣ ಕ್ರಮಗಳನ್ನು ಪರಿಶೀಲನೆ ನಡೆಸುತ್ತೇನೆ. ಕೋವಿಡ್ ಸೋಂಕು ಹೆಚ್ಚಾಗಿರುವ ಎಲ್ಲಾ ಗಡಿ ಜಿಲ್ಲೆಗಳಿಗೆ ಭೇಟಿ ನೀಡಲು ತೀರ್ಮಾನ ಮಾಡಿದ್ದೇನೆ ಎಂದು ಅವರು ತಿಳಿಸಿದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
Comments (Click here to Expand)










