varthabharthi


ಕರ್ನಾಟಕ

ಕೃಷಿ ಇಲಾಖೆಯಲ್ಲಿ ಬಹುಕೋಟಿ ಹಗರಣ ಆರೋಪ: ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು

ವಾರ್ತಾ ಭಾರತಿ : 7 Sep, 2021

 ಸಚಿವ ಬಿ.ಸಿ.ಪಾಟೀಲ್

ಬೆಂಗಳೂರು, ಸೆ.7: ರಾಜ್ಯ ಕೃಷಿ ಇಲಾಖೆಯಲ್ಲಿ 210 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸಿ ಕೃಷಿ ಖಾತೆ ಸಚಿವ ಬಿ.ಸಿ.ಪಾಟೀಲ್ ವಿರುದ್ಧ ಎಸಿಬಿಗೆ ದೂರು ಸಲ್ಲಿಸಲಾಗಿದೆ.

ಎಸಿಎಫ್ ಕರ್ನಾಟಕ ಸಂಘಟನೆಯ ರಾಜ್ಯಾಧ್ಯಕ್ಷ ಎನ್.ಕೃಷ್ಣಮೂರ್ತಿ ಎಂಬುವವರು ಕೃಷಿ ಖಾತೆ ಸಚಿವ ಬಿ.ಸಿ.ಪಾಟೀಲ್ ಮತ್ತು ಕೃಷಿ ಇಲಾಖೆ ಹೆಚ್ಚುವರಿ ನಿರ್ದೇಶಕ ದಿವಾಕರ್ ವಿರುದ್ಧ ದಾಖಲೆಗಳ ಸಮೇತ ದೂರು ದಾಖಲಿಸಿದ್ದಾರೆ.

ರೈತರಿಗೆ ನೀಡುವ ಯಂತ್ರಗಳ ಖರೀದಿ ವೇಳೆ ಭ್ರಷ್ಟಾಚಾರ ನಡೆದಿದೆ. ಹಾಗಾಗಿ ತಕ್ಷಣ ಕೃಷಿ ಸಚಿವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿರುವ ಅವರು, ಕರ್ನಾಟಕ ರಾಜ್ಯ ಭ್ರಷ್ಟಾಚಾರದಲ್ಲಿ ಮೊದಲನೇ ಸ್ಥಾನದಲ್ಲಿದೆ ಎಂದು ದೂರಿದರು.

ಕೃಷಿ ಇಲಾಖೆಯಲ್ಲಿ ನೀರಾವರಿಗೆ ಪಂಪ್ ಸೆಟ್ ಕೊಡಲಾಗುತ್ತಿದೆ. ಆ ಯಂತ್ರ ಖರೀದಿಯಲ್ಲೂ ಭ್ರಷ್ಟಾಚಾರ ಆಗಿದೆ.  ಔಷಧಿ ಹೊಡೆಯುವ ಯಂತ್ರೋಪಕರಣಗಳ ಖರೀದಿಯಲ್ಲೂ ಹಗರಣ ಆಗಿದೆ ಎಂದು ದೂರಿನಲ್ಲಿ ಆಪಾದಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)