varthabharthi


ಕರ್ನಾಟಕ

ಲೂಟಿಯೊಂದನ್ನು ಬಿಟ್ಟು ಬೇರೇನು ಮಾಡಿದ್ದೀರಿ?: ಕೃಷಿ ಸಚಿವ ಬಿ.ಸಿ ಪಾಟೀಲ್ ವಿರುದ್ಧ ಕಾಂಗ್ರೆಸ್ ಆಕ್ರೋಶ

ವಾರ್ತಾ ಭಾರತಿ : 9 Sep, 2021

ಬೆಂಗಳೂರು: ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಕೃಷಿ ಸಚಿವ ಬಿ.ಸಿ ಪಾಟೀಲ್ ಅವರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. 

ಈ ಕುರಿತು ಗುರುವಾರ ಟ್ವೀಟ್ ಮಾಡಿರುವ ಕಾಂಗ್ರೆಸ್, ಕೃಷಿ ಸಚಿವರಾಗಿ ಲೂಟಿಯೊಂದನ್ನು ಬಿಟ್ಟು ಬೇರೇನು ಮಾಡಿದ್ದೀರಿ? ಎಂದು ಪ್ರಶ್ನಿಸಿದೆ. 

'ಇಷ್ಟು ದಿನ ಡಿಎಪಿ ಗೊಬ್ಬರದ ಕೊರತೆ, ಈಗ ಯೂರಿಯಾ ಗೊಬ್ಬರದ ಕೊರತೆ, ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡುವ ಎಲ್ಲಾ ಕೆಲಸಗಳನ್ನು ಬಿಜೆಪಿ ಸರ್ಕಾರ ಮಾಡುತ್ತಿದೆ. ರೈತರನ್ನು ಹೇಡಿಗಳು ಎಂದಿದ್ದ ಬಿ.ಸಿ ಪಾಟೀಲ್ ಅವರೇ, ಗೊಬ್ಬರ ಕೊರತೆ ನೀಗಿಸಲಾಗದ ನೀವು ನಿಜವಾದ ಹೇಡಿಯಲ್ಲವೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)