ಸೆ.19: ಬೇಕಲ್ ಉಸ್ತಾದ್ ಪ್ರಥಮ ಆಂಡ್ ನೇರ್ಚೆ
ಮಂಗಳೂರು : ಮರಿಕ್ಕಳ ಜುಮಾ ಮಸ್ಜಿದ್ ವತಿಯಿಂದ ಮರಿಕ್ಕಳ ಜಮಾಅತ್ ನಲ್ಲಿ 38 ವರ್ಷಗಳ ಕಾಲ ಅಧ್ಯಕ್ಷರಾಗಿಯೂ, ಖಾಝಿಯೂ ಆಗಿದ್ದ ತಾಜುಲ್ ಪುಖಹಾಅ್ ಬೇಕಲ್ ಉಸ್ತಾದರ ಪ್ರಥಮ ಆಂಡ್ ನೇರ್ಚೆಯು ಸೆ. 19ರ ಬೆಳಗ್ಗೆ 10ಗಂಟೆಗೆ ಮರಿಕ್ಕಳದಲ್ಲಿ ನಡೆಯಲಿದೆ.
ಮರಿಕ್ಕಳ ಜುಮಾ ಮಸ್ಜಿದ್ ಅಧ್ಯಕ್ಷ ಅಬ್ಬಾಸ್ ಕೊಡಂಚಿಲ್ ಅಧ್ಯಕ್ಷತೆ ವಹಿಸಲಿರುವರು.
ಶೈಖುನಾ ಖಾಝಿ ಮಾಣಿ ಉಸ್ತಾದ್, ಸಯ್ಯಿದ್ ಝೈನುಲ್ ಅಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು, ಹುಸೈನ್ ಸಅದಿ ಕೆ.ಸಿ.ರೋಡ್, ಎಸ್.ಪಿ ಹಂಝ ಸಖಾಫಿ, ಅನಸ್ ಸಿದ್ದೀಕ್ ಸಖಾಫಿ ಬೆಂಗಳೂರು, ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ ತೋಕೆ, ಮೌಲಾನಾ ಶಾಫಿ ಸಅದಿ ಬೆಂಗಳೂರು, ಎಸ್ ವೈ.ಎಸ್ ರಾಜ್ಯಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ, ಪ್ರಧಾನ ಕಾರ್ಯದರ್ಶಿ ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಬ್ದುಲ್ಲತೀಫ್ ಸಅದಿ ಶಿಮೊಗ್ಗ, ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, ಪಿ.ಪಿ ಮಹಮ್ಮದ್ ಸಖಾಫಿ, ಕೆ.ಕೆ.ಮುಹಿಯ್ಯದ್ದೀನ್ ಕಾಮಿಲ್ ಸಖಾಫಿ, ಮಹಮ್ಮದಲಿ ಸಖಾಫಿ ಸುರಿಬೈಲ್, ಅಲ್ ಮದೀನಾ ಮ್ಯಾನೇಜರ್ ಅಬ್ದುಲ್ ಖಾದರ್ ಸಖಾಫಿ, ಮರಿಕ್ಕಳ ಮುದರ್ರಿಸ್ ಅಬ್ಬಾಸ್ ಸಖಾಫಿ ಮಡಿಕೇರಿ, ಸ್ಥಳೀಯ ಶಾಸಕ ಯು.ಟಿ ಖಾದರ್ ಹಾಗೂ ಸಾಮಾಜಿಕ, ಸಂಘಟನಾ ನಾಯಕರು ಭಾಗವಹಿಸಲಿದ್ದಾರೆ ಎಂದು ಮರಿಕ್ಕಳ ಜುಮಾ ಮಸ್ಜಿದ್ ಪ್ರಧಾನ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮರಿಕ್ಕಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.