ಹಿರಿಯ ನ್ಯಾಯವಾದಿ ಜಗನ್ನಾಥ ನಿಧನ
ಮಂಗಳೂರು, ಜ.15:ಮಂಗಳೂರು ವಕೀಲರ ಸಂಘದ ಹಿರಿಯ ಸದಸ್ಯ, ನ್ಯಾಯವಾದಿ, ನೋಟರಿ ಎಂ.ಜಗನಾಥ್ (89) ಅಲ್ಪಕಾಲದ ಅಸೌಖ್ಯದಿಂದ ಶನಿವಾರ ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರ ಸಹಿತ ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕೇಂದ್ರದ ಮಾಜಿ ಸಚಿವ ಜನಾರ್ದನ ಪೂಜಾರಿಯ ಪ್ರಥಮ ಶಿಷ್ಯರಾಗಿದ್ದ ಜಗನ್ನಾಥ ಅವರು ಜನಾರ್ದನ ಪೂಜಾರಿಯವರ ಕಚೇರಿಯಲ್ಲಿ ಇತ್ತೀಚಿನ ದಿನಗಳವರೆಗೂ ಕರ್ತವ್ಯ ನಿರ್ವಹಿಸಿದ್ದರು. ಕೆಲವು ದಿನಗಳಿಂದ ಅವರು ವಯೋಸಹಜ ಅಸ್ವಸ್ಥತೆಯಿಂದ ಬಳಲುತ್ತಿದ್ದರು.
Next Story