ವೇಷ ಹಾಕಿದ ಪ್ರಕರಣ: ಇಬ್ಬರು ಆರೋಪಿಗಳಿಗೆ ಜಾಮೀನು
ಬಂಟ್ವಾಳ, ಜ.17: ವಿಟ್ಲ ಪೊಲೀಸ್ ಠಾಣೆ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ವರನೊಬ್ಬ ಮುಖಕ್ಕೆ ಕಪ್ಪು ಬಣ್ಣ ಹಚ್ಚಿ ವೇಷ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾದ ಇಬ್ಬರು ಆರೋಪಿಗಳಿಗೆ ಬಂಟ್ವಾಳ ಎ.ಸಿ.ಜೆ. ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಲ್ಪಡಿ ನಿವಾಸಿ ಅಹ್ಮದ್ ಮುಜಿತಾಬ್ ಮತ್ತು ಬಾಯಾರು ಪದವು ನಿವಾಸಿ ಮೊಯ್ದೀನ್ ಮುನಿಶ್ ಎಂಬವರನ್ನು ಇತ್ತೀಚಿಗೆ ಪೊಲೀಸರು ಬಂಧಿಸಿದ್ದರು.
ಬಂಧಿತ ಆರೋಪಿಗಳನ್ನು ಪೊಲೀಸರು ಅದೇ ದಿನ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನ ವಿಧಿಸಿತ್ತು. ಆರೋಪಿಗಳ ಪರ ನ್ಯಾಯವಾದಿ ಶ್ರೀಕಾಂತ್ ಭಟ್ ವಾದ ಮಂಡಿಸಿದ್ದು ಬಂಟ್ವಾಳ ನ್ಯಾಯಾಲಯ ಆರೋಪಿಗಳಿಗೆ ಸೋಮವಾರ ಜಾಮೀನು ನೀಡಿದೆ.
Next Story