varthabharthi


ಬೆಂಗಳೂರು

ಅಕ್ರಮ ಹಣ ವರ್ಗಾವಣೆ ಪ್ರಕರಣ: ಅಟ್ಲಾಸ್ ಜ್ಯುವೆಲ್ಲರಿಯಿಂದ 26.59 ಕೋಟಿ ಹೂಡಿಕೆ ಹಣ ವಶಕ್ಕೆ ಪಡೆದ ಈಡಿ

ವಾರ್ತಾ ಭಾರತಿ : 25 Jan, 2022

ಬೆಂಗಳೂರು, ಜ.25: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಅಟ್ಲಾಸ್ ಜ್ಯುವೆಲ್ಲರಿ ಇಂಡಿಯಾ ಲಿಮಿಟೆಡ್‍ನಿಂದ 26.59 ಕೋಟಿ ರೂ. ಮೌಲ್ಯದ ಹೂಡಿಕೆ ಹಣ, ಚಿನ್ನಾಭರಣವನ್ನು ಜಾರಿ ನಿರ್ದೇಶನಾಲಯ (ಈಡಿ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಕಳೆದ ವಾರ ಮುಂಬೈ, ಬೆಂಗಳೂರು ಮತ್ತು ದೆಹಲಿ ಸೇರಿ ಮೂರು ಕಡೆ ಈಡಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಅಟ್ಲಾಸ್ ಜ್ಯುವೆಲ್ಲರಿ ಕಂಪೆನಿ ಪಿಎಂಎಲ್‍ಎ ಕಾಯ್ದೆ ಸಂಪೂರ್ಣ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದೆ. ಈ ಕಾರಣಕ್ಕೆ ಕಂಪೆನಿಯಲ್ಲಿ ಹೂಡಿಕೆಯಾಗಿದ್ದ ಹಣ ಹಾಗೂ ಚಿನ್ನಾಭರಣವನ್ನು ಅಧಿಕಾರಿಗಳು ಜಪ್ತಿ ಮಾಡಿದಿದ್ದಾರೆ ಎಂದು ತಿಳಿದುಬಂದಿದೆ.

ಜಪ್ತಿ ಸಂಬಂಧ ಕಂಪನಿ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ನಡೆಸುತ್ತಿದೆ ಎಂದು ಜಾರಿ ನಿರ್ದೇಶನಾಲಯ ಮಾಹಿತಿ ನೀಡಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)