ಬೊಮ್ಮಾಯಿ ಸರಕಾರಕ್ಕೆ 6 ತಿಂಗಳು: 'ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು' ಕಿರು ಹೊತ್ತಗೆ ಬಿಡುಗಡೆ
ಬೆಂಗಳೂರು, ಜ.28: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಆರು ತಿಂಗಳ ಅವಧಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಪ್ರಗತಿಯ ಮಾಹಿತಿ ನೀಡುವ 'ಭವ್ಯ ಭವಿಷ್ಯಕ್ಕಾಗಿ ಭರವಸೆಯ ಹೆಜ್ಜೆಗಳು' ಕಿರು ಹೊತ್ತಗೆಯನ್ನು ಸಿಎಂ ಬೊಮ್ಮಾಯಿ ಬಿಡುಗಡೆ ಮಾಡಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯುತ್ತಿರುವ ಜನ ಕಲ್ಯಾಣ ಕಾರ್ಯಕ್ರಮದಲ್ಲಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಎಸ್.ಟಿ. ಸೋಮಶೇಖರ್, ಬಿ.ಸಿ.ಪಾಟೀಲ್, ಉಮೇಶ್ ಕತ್ತಿ, ಗೋಪಾಲಯ್ಯ, ಡಾ. ಸುಧಾಕರ್, ಭೈರತಿ ಬಸವರಾಜ, ವಿ. ಸೋಮಣ್ಣ, ಗೋವಿಂದ ಕಾರಜೋಳ, ಎಸ್. ಅಂಗಾರ ಮತ್ತಿತರರು ಉಪಸ್ಥಿತರಿದ್ದಾರೆ.