ಬ್ರಹ್ಮಾವರ | ಬೆಂಕಿಗಾಹುತಿಯಾದ ಕಾರಿನಲ್ಲಿ ಜೋಡಿಯ ಮೃತದೇಹ ಪತ್ತೆ: ಆತ್ಮಹತ್ಯೆ ಶಂಕೆ
ಬ್ರಹ್ಮಾವರ, ಮೇ 22: ರಸ್ತೆ ಮಧ್ಯೆ ಸುಟ್ಟುಹೋದ ಕಾರೊಂದರಲ್ಲಿ ಜೋಡಿಯ ಮೃತದೇಹ ಹೆಗ್ಗುಂಜೆ ಗ್ರಾಪಂ ವ್ಯಾಪ್ತಿಯ ಕೊತ್ತೂರು ಎಂಬಲ್ಲಿ ಇಂದು ಬೆಳಗಿನ ಜಾವ ಪತ್ತೆಯಾಗಿದೆ.
ಮೃತರನ್ನು ಬೆಂಗಳೂರು ಆರ್.ಟಿ.ನಗರದ ನಿವಾಸಿಗಳಾದ ಯಶವಂತ ಯಾದವ್ ಮತ್ತು ಜ್ಯೋತಿ ಎಂದು ಗುರುತಿಸಲಾಗಿದೆ.
ಇವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಬೆಂಗಳೂರಿನಿಂದ ಮಂಗಳೂರಿಗೆ ಬಂದು ಬಾಡಿಗೆ ಕಾರನ್ನು ಪಡೆದುಕೊಂಡು ಬ್ರಹ್ಮಾವರದ ಕಡೆ ಬಂದಿದ್ದರೆನ್ನಲಾಗಿದೆ. ಈ ನಡುವೆ ಇವರಿಬ್ಬರು ನಾಪತ್ತೆಯಾಗಿರುವ ಬಗ್ಗೆ ಬೆಂಗಳೂರಿನಲ್ಲಿ ಪೊಲೀಸ್ ದೂರು ದಾಖಲಾಗಿದೆ ಎನ್ನಲಾಗಿದೆ
ಬ್ರಹ್ಮಾವರಕ್ಕೆ ಬಂದಿದ್ದ ಇವರು ಕಾರಿನೊಳಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.
ನಸುಕಿನ ವೇಳೆ ಕಾರು ಹೊತ್ತಿ ಉರಿಯುತ್ತಿರುವುದನ್ನು ಸ್ಥಳೀಯರು ಗಮನಿಸಿ ಪರಿಶೀಲಿಸಿದಾಗ ಅದರೊಳಗೆ ಇಬ್ಬರ ಮೃತದೇಹ ಪತ್ತೆಯಾಗಿದೆ
ಸ್ಥಳಕ್ಕೆ ಆಗಮಿಸಿದ ಬ್ರಹ್ಮಾವರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Next Story