ಮಹಾನ್ ವ್ಯಕ್ತಿಗಳನ್ನು ಪಠ್ಯಪುಸ್ತಕದಲ್ಲಿ ಕೈಬಿಟ್ಟಿರುವುದಕ್ಕೆ ಜೆಡಿಎಸ್ ಖಂಡನೆ
ಉಡುಪಿ, ಮೇ ೨೨: ಪ್ರಪಂಚಕ್ಕೆ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ಸರ್ವಕಾಲಿಕ ಸಂದೇಶದ ಮೂಲಕ ಯೋಗ್ಯವಾದ ಸಂದೇಶಗಳನ್ನು ಸಮಾಜಕ್ಕೆ ನೀಡಿದ ಮಹಾನ್ ವ್ಯಕ್ತಿ ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣಗುರುಗಳ ಹೆಸರನ್ನು ಪಠ್ಯಪುಸ್ತಕದಲ್ಲಿ ಬಿಟ್ಟಿರುವ ರಾಜ್ಯ ಸರಕಾರದ ಕ್ರಮವನ್ನು ಉಡುಪಿ ಜಿಲ್ಲಾ ಜೆಡಿಎಸ್ ಖಂಡಿಸಿದೆ.
ಅಂತೆಯೇ ಕ್ರಾಂತಿಕಾರಿ ಹೋರಾಟಗಾರ ಭಗತ್ ಸಿಂಗ್, ಮಹಾನ್ ತತ್ವಜ್ಞಾನಿ ಬಸವಣ್ಣ ಮತ್ತು ಸಮಾಜ ಸುಧಾರಕ ರಾಮಸ್ವಾಮಿ ಪೆರಿಯಾರ್ ಅವರ ಜೀವನಾದರ್ಶ, ತತ್ವಾದರ್ಶ ಮತ್ತು ವಿಚಾರಧಾರೆಗಳ ಬಗ್ಗೆ ಇದ್ದ ಪಾಠವನ್ನು ರಾಜ್ಯಸರಕಾರ ಪಠ್ಯಪುಸ್ತಕದಿಂದ ಬಿಟ್ಟಿರುವುದು ಸಮಂಜಸವಲ್ಲ ಎಂದು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್ ವಿ ಶೆಟ್ಟಿ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ.
Next Story