ಕುತೂಹಲ ಮೂಡಿಸಿದ ಸಿಎಂ ಬೊಮ್ಮಾಯಿ RSS ಕಚೇರಿ ಭೇಟಿ!
ಬೆಂಗಳೂರು, ನ.24: ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಆರೆಸ್ಸೆಸ್ (Rashtriya Swayamsevak Sangh) ಕಚೇರಿಗೆ ತೆರಳಿ ಸಂಘಪರಿವಾರದ ನಾಯಕರೊಂದಿಗೆ ಚರ್ಚೆ ನಡೆಸಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಗುರುವಾರ ಸಂಜೆ ಚಾಮರಾಜಪೇಟೆಯ ಕೆಂಪೇಗೌಡ ನಗರದ ಕೇಶವ ಕೃಪಾಕ್ಕೆ ಆಗಮಿಸಿದ ಬಸವರಾಜ ಬೊಮ್ಮಾಯಿ, ಸಚಿವರಾದ ಆರ್.ಅಶೋಕ್, ಡಾ. ಅಶ್ವತ್ಥನಾರಾಯಣ, ಡಾ. ಸುಧಾಕರ್, ಮುನಿರತ್ನ ಸೇರಿದಂತೆ ಪ್ರಮುಖರು ಸಭೆ ನಡೆಸಿದರು.
ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಜತೆಗೆ ಚಿಲುಮೆ ಸಂಸ್ಥೆ ಹಗರಣ, 40ರಷ್ಟು ಕಮಿಷನ್ ಆರೋಪ ಸೇರಿದಂತೆ ಇನ್ನಿತರ ವಿಷಯಗಳ ಕುರಿತು ಚರ್ಚೆ ನಡೆಲಾಗಿದೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ಮುಖ್ಯಮಂತ್ರಿ ಕಚೇರಿಯಿಂದ BJP ಕಾರ್ಯಕರ್ತರಿಗೆ ವೇತನ ಪಾವತಿ: ಸುಧೀರ್ ಮುರೊಳ್ಳಿ ಆರೋಪ
Next Story